ಆವರಗೆರೆ ಬಳಿಯ ಶ್ರೀ ಭಗವಾನ್ ಮಹಾವೀರ ಗೋಶಾಲೆಯಲ್ಲಿ 550 ಹಸು ಮತ್ತು ಕರುಗಳನ್ನು ಸಾಕಲಾಗಿದ್ದು, ಈ ಬಾರಿ ಅತಿವೃಷ್ಟಿ ಯಿಂದ ಹುಲ್ಲು ಕಡಿಮೆ ಪ್ರಮಾಣದಲ್ಲಿ ಬರುತ್ತಿದೆ.
ಕುರ್ಕಿಯಲ್ಲಿ ವಿಠಲ ರುಖುಮಾಯಿ ದಿಂಡಿ ಉತ್ಸವ
ಕುರ್ಕಿ ಗ್ರಾಮದ ಬುಳ್ಳಾಪುರ ಗ್ರಾಮದಲ್ಲಿ ಶ್ರೀ ವಿಠ್ಠಲ ರುಖುಮಾಯಿ ದೇವರ ದಿಂಡಿ ಉತ್ಸವ ಇಂದು ಜರುಗಿತು. ನೂತನ ವಿಠ್ಠಲ ರುಖುಮಾಯಿ ದೇವರ ದೇವಸ್ಥಾನವನ್ನು ಅತಿ ಶೀಘ್ರದಲ್ಲೇ ಕಾರ್ತಿಕ ಮಾಸದಲ್ಲಿ ನಿರ್ಮಾಣವಾಗಲಿ ಎಂದು ಗ್ರಾಮದ ಎಲ್ಲಾ ಭಕ್ತರು ವಾರಕರಿ ಸಂತರು ಹಾರೈಸಿ ವಾಗ್ದಾನ ನೀಡಿದರು.
ಬಸಾಪುರದ ಸರ್ಕಾರಿ ಶಾಲೆಯಲ್ಲಿ ತರಬೇತಿ
ಮಹಾನಗರ ಪಾಲಿಕೆಯ 21ನೇ ವಾರ್ಡ್ನ ಬಸಾಪುರದ ಸರ್ಕಾರಿ ಪ್ರೌಢಶಾಲೆ ಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಾಗೂ ಪೋಷಕರ ತರಬೇತಿ ಕಾರ್ಯಾಗಾರವನ್ನು ಹಿರಿಯ ಸಾಹಿತಿ ಹಾಗೂ ನಗರ ಪಾಲಿಕೆ ಮಾಜಿ ಸದಸ್ಯ ಬಾ.ಮ. ಬಸವರಾಜಯ್ಯ ಉದ್ಘಾಟಿಸಿದರು.
ವಿದ್ಯಾರ್ಥಿ ವೇತನ, ಹಾಸ್ಟೆಲ್ ಸೌಲಭ್ಯಕ್ಕೆ ಆಗ್ರಹ
ಜಗಳೂರು : ಬಿ.ಇಡಿ ಹಾಗೂ ಪ್ಯಾರಾಮೆಡಿಕಲ್ ಖಾಸಗಿ ವಿದ್ಯಾರ್ಥಿಗಳಿಗೆ ಸರ್ಕಾರ ವಿದ್ಯಾರ್ಥಿ ವೇತನ ಹಾಗೂ ಹಾಸ್ಟೆಲ್ ನೀಡದಿರು ವುದನ್ನು ವಿರೋಧಿಸಿ, ಇಂದು ಪಟ್ಟಣ ದಲ್ಲಿ ಎಸ್ಎಫ್ಐ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಎಸ್ವಿಆರ್ಗೆ ಸಚಿವ ಸ್ಥಾನಕ್ಕೆ ಒತ್ತಾಯ
ಹರಪನಹಳ್ಳಿ : ಶಾಸಕ ಎಸ್.ವಿ. ರಾಮಚಂದ್ರಪ್ಪ ಅವರಿಗೆ ಸಚಿವ ಸ್ಥಾನ ನೀಡುವಂತೆ ತಾಲ್ಲೂಕು ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ಕೆ. ಉಚ್ಚೆಂಗೆಪ್ಪ ಒತ್ತಾಯಿಸಿದ್ದಾರೆ.
ಸಿದ್ದರಾಮೇಶ್ವರ ಶ್ರೀಗಳ ಜನ್ಮದಿನಾಚರಣೆ
ಚಿತ್ರದುರ್ಗ : ಭಾರತೀಯ ಮಜ್ದೂರ್ ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷರಾದ ಶ್ರೀಮತಿ ಸವಿತಾಭಾಯಿ ಮಲ್ಲೇಶ್ ನಾಯ್ಕ್ ನಾಯಕತ್ವದಲ್ಲಿ ಚಿತ್ರದುರ್ಗದ ಭೋವಿ ಪೀಠಾಧ್ಯಕ್ಷರಾದ ಶ್ರೀ ಸಿದ್ದರಾಮೇಶ್ವರ ಶ್ರೀಗಳ ಹುಟ್ಟು ಹಬ್ಬ ಆಚರಿಸಲಾಯಿತು.
ಸರ್ಕಾರಿ ನೌಕರರ ಒಕ್ಕೂಟದ ಪ್ರತಿಭಟನೆ
18 ತಿಂಗಳ ತುಟ್ಟಿ ಭತ್ಯೆ ಬಿಡುಗಡೆ, ಉಚಿತ ಲಸಿಕೆ, ಎನ್ ಪಿಎಸ್ ರದ್ದುಗೊಳಿಸಿ ನಿಶ್ಚಿತ ಪಿಂಚಣಿ ವ್ಯವಸ್ಥೆ, ಖಾಲಿ ಹುದ್ದೆಗಳ ಭರ್ತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ನಿನ್ನೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿತು.
ಜಿಲ್ಲೆಯಲ್ಲಿ ಎಸಿಬಿ ಅಧಿಕಾರಿಗಳ ದಾಳಿ
ಜಿಲ್ಲೆಯ ಚನ್ನಗಿರಿ ತಾಲ್ಲೂಕು ಸೇರಿದಂತೆ ಐದು ಕಡೆಗಳಲ್ಲಿ ಏಕಕಾಲಕ್ಕೆ ಕೋಲಾರ ಜಿಲ್ಲೆಯ ಮಾಲೂರು ನಗರ ಸಭೆಯ ಯೋಜನಾ ನಿರ್ದೇಶಕ ಹೆಚ್.ಆರ್. ಕೃಷ್ಣಪ್ಪ ಅವರ ಮನೆಗಳು, ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳ ತಂಡ ಇಂದು ಬೆಳಿಗ್ಗೆ ದಾಳಿ ಮಾಡಿದೆ.
ಲಯನ್ಸ್ನಿಂದ ಆಹಾರದ ಕಿಟ್ ವಿತರಣೆ
ಲಯನ್ಸ್ ಕ್ಲಬ್ ಆಶ್ರಯದಲ್ಲಿ ಸಿ.ಜಿ. ಆಸ್ಪತ್ರೆ ಮತ್ತು ಚಾಮರಾಜಪೇಟೆಯ ಹೆರಿಗೆ ಆಸ್ಪತ್ರೆ ಮತ್ತು ಯುನಿಟಿ ಹೆಲ್ತ್ ಸೆಂಟರ್ನಲ್ಲಿ 6ನೇ ದಿನದ ಆಹಾರ ಪೊಟ್ಟಣ ಮತ್ತು ನೀರಿನ ಬಾಟಲ್ಗಳನ್ನು ಲಯನ್ಸ್ ಕ್ಲಬ್ ಉಪಾಧ್ಯಕ್ಷ ಎನ್.ಆರ್. ನಾಗಭೂಷಣ್ ರಾವ್ ನೇತೃತ್ವದಲ್ಲಿ ವಿತರಿಸಲಾಯಿತು.
ಮಹಿಳೆಗೆ ಸಾಧನೆಯೊಂದಿಗೆ ಅಸಮಾನತೆ ನಿವಾರಿಸುವ ಸವಾಲಿದೆ : ಶಾಂತಕುಮಾರಿ
ಮಹಿಳೆಯರು ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡು, ಹೆಣ್ಣು ಅಬಲೆಯಲ್ಲ ಸಬಲೆ ಎಂದು ಸಾಬೀತುಪಡಿಸುತ್ತಿದ್ದಾಳೆ. ಮಹಿಳಾ ಸ್ವಾತಂತ್ರ್ಯವನ್ನು ಧನಾತ್ಮಕವಾಗಿ ಹಾಗೂ ಸಂಸ್ಕೃತಿಯ ನೆಲೆಗಟ್ಟಿನಲ್ಲಿ ಬಳಸಿಕೊಂಡು ಮುನ್ನಡೆಯ ಬೇಕಿದೆ