ಉಕ್ಕಡಗಾತ್ರಿಯಲ್ಲಿ ಆಲಿಕಲ್ಲು ಮಳೆ
ಉಕ್ಕಡಗಾತ್ರಿ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಸೋಮವಾರ ಸಂಜೆ ಬಿರುಗಾಳಿ ಗುಡುಗು, ಸಿಡಿಲು ಸಹಿತ ಆಲಿಕಲ್ಲು ಮಳೆ ಸುರಿದಿದೆ.
ಉಕ್ಕಡಗಾತ್ರಿ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಸೋಮವಾರ ಸಂಜೆ ಬಿರುಗಾಳಿ ಗುಡುಗು, ಸಿಡಿಲು ಸಹಿತ ಆಲಿಕಲ್ಲು ಮಳೆ ಸುರಿದಿದೆ.
ಮಲೇಬೆನ್ನೂರು : ಸರಿಯಾದ ನಾಯಕತ್ವದಿಂದ ಒಂದು ದೇಶ ಪ್ರಗತಿ ಸಾಧಿಸಲು ಸಾಧ್ಯ. ಅಂತಹ ನಾಯಕ ನರೇಂದ್ರ ಮೋದಿ ಅವರಿಂದಾಗಿ ಭಾರತ ವಿಕಸಿತಗೊಂಡಿದೆ ಎಂದು ಯುವ ವಾಗ್ಮಿ ಹಾರಿಕಾ ಮಂಜುನಾಥ್ ಹೇಳಿದರು.
ಮಲೇಬೆನ್ನೂರು : ಹುಬ್ಬಳ್ಳಿಯ ಕಾಲೇಜು ಆವರಣದಲ್ಲಿ ಹಿಂದೂ ಸಮುದಾಯಕ್ಕೆ ಸೇರಿದ ಯುವತಿ ಹತ್ಯೆ ನಡೆದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಮ್ಮನಿದ್ದಾರೆ, ಗೃಹಮಂತ್ರಿ ಜಿ. ಪರಮೇಶ್ವರ ಅವರು ಬೇಕಾಬಿಟ್ಟಿ ಹೇಳಿಕೆ ನೀಡುತ್ತಿದ್ದಾರೆ ಎಂದು ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಂಚಾಲಕ ಸತೀಶ್ ಪೂಜಾರಿ ಖಂಡಿಸಿದರು.
ಮಲೇಬೆನ್ನೂರು ಸಮೀ ಪದ ಜಿಗಳಿ ಗ್ರಾಮದಲ್ಲಿ ನೂತನ ವಾಗಿ ನಿರ್ಮಿಸಿರುವ ಶ್ರೀ ಕಲ್ಲೇ ಶ್ವರ ದೇವಸ್ಥಾನ ಮತ್ತು ಗ್ರಾಮ ದೇವತೆ ಶ್ರೀ ಉಡುಸಲಮ್ಮದೇವಿ ದೇವಸ್ಥಾನಗಳ ಉದ್ಘಾಟನೆ ಮತ್ತು ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಸಮಾ ರಂಭವನ್ನು ಇಂದು ಹಮ್ಮಿಕೊಳ್ಳ ಲಾಗಿದೆ.
ಹರಿಹರ : ಹುಬ್ಬಳ್ಳಿ ಬಿವಿಬಿ ಕಾಲೇಜಿನ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರನ್ನು ಕೊಲೆ ಮಾಡಿರುವುದು ಖಂಡನೀಯ. ಕೃತ್ಯವನ್ನು ಎಸಗಿರುವ ವ್ಯಕ್ತಿಯನ್ನು ಕೂಡಲೇ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿ ಕಾರ್ತಿಕ್ ಸಾಂಸ್ಕೃತಿಕ ಸೇವಾ ಅಭಿವೃದ್ಧಿ ಸಂಸ್ಥೆ ವತಿಯಿಂದ ತಹಶೀಲ್ದಾರ್ ಗುರುಬಸವರಾಜ್ ಅವರಿಗೆ ಮನವಿ ಅರ್ಪಿಸಿದರು.
ಮಲೇಬೆನ್ನೂರು : ಮಳೆ – ಬೆಳೆ ಇಲ್ಲದೇ ಬರಗಾಲ ಎದುರಿಸುತ್ತಿರುವ ಕೊಕ್ಕನೂರಿನ ಗ್ರಾಮಸ್ಥರು ತಮ್ಮ ನೆಚ್ಚಿನ ಹನುಮಪ್ಪನಿಗೆ ನೋಟಿನ ಹಾರಗಳನ್ನು ಹಾಕುವ ಮೂಲಕ ಭಕ್ತಿಗೆ ಬರವಿಲ್ಲ ಎಂಬುದನ್ನು ಶುಕ್ರವಾರ ಸಾಬೀತು ಮಾಡಿದ್ದಾರೆ.
ಮಲೇಬೆನ್ನೂರು : ಸುಕ್ಷೇತ್ರ ಕೊಕ್ಕನೂರು ಗ್ರಾಮದ ಆರಾಧ್ಯ ದೈವ ಶ್ರೀ ಆಂಜನೇಯ ಸ್ವಾಮಿಯ ಮಹಾರಥೋತ್ಸವವು ಗುರುವಾರ ಬೆಳಗಿನ ಜಾವ ಅಪಾರ ಭಕ್ತರ ಸಮ್ಮುಖದಲ್ಲಿ ವೈಭವದೊಂದಿಗೆ ಜರುಗಿತು.
ಹರಿಹರ ತಾಲ್ಲೂಕಿನ ಕೊಂಡಜ್ಜಿ ಗ್ರಾಮದ ಪ್ರವಾಸಿ ತಾಣವಾಗಿರುವ ದೊಡ್ಡ ಕೆರೆ ನೀರಿಲ್ಲದೇ ಬತ್ತಿ ಬರಿದಾಗಿದ್ದು, ಜನ – ಜಾನುವಾರಗಳಿಗೆ, ಪ್ರಾಣಿ – ಪಕ್ಷಿಗಳಿಗೆ ಸಂಕಷ್ಟ ಎದುರಾಗಿದೆ. ತುಂಗಭದ್ರಾ ನದಿಯಿಂದ ಕೊಂಡಜ್ಜಿ ಕೆರೆಗೆ ನೀರು ತುಂಬಿಸುವ ಯೋಜನೆ ಜಾರಿಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಹರಿಹರ : ನಗರದಲ್ಲಿ ಶ್ರೀ ಕಾಳಿಕಾದೇವಿ ರಥೋತ್ಸವ ಶ್ರದ್ಧಾ – ಭಕ್ತಿ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸಹಸ್ರಾ ರ್ಜುನ ವೃತ್ತದಲ್ಲಿರುವ ಕಾಳಿಕಾದೇವಿ ದೇವಸ್ಥಾನದಲ್ಲಿ ದೇವಿಗೆ ಅಭಿಷೇಕ, ಅಲಂಕಾರ, ಮಹಾಮಂಗಳಾರತಿ ನಡೆದು, ನಂತರ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.
ಹರಿಹರ : ನಗರದ ಹೊರವಲಯದ ಹರಳಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವದ ಮುಳ್ಳು ಗದ್ದಿಗೆ ಉತ್ಸವಕ್ಕೆ ಟ್ರ್ಯಾಕ್ಟರ್ನಲ್ಲಿ ಮುಳ್ಳು ತೆಗೆದುಕೊಂಡು ಹೋಗುವ ಮಾರ್ಗ ಮಧ್ಯದಲ್ಲಿ ಟ್ರ್ಯಾಕ್ಟರ್ ಸ್ಟೇರಿಂಗ್ ಕಟ್ ಆಗಿದ್ದರಿಂದ ನಿಯಂತ್ರಣ ತಪ್ಪಿ ಟ್ರಾಕ್ಟರ್ ಪಲ್ಟಿ ಆದ ಪರಿಣಾಮ ಟ್ರ್ಯಾಕ್ಟರ್ ನಲ್ಲಿದ್ದ ಹಲವು ಯುವಕರಿಗೆ ಗಾಯಗಳಾಗಿದೆ.
ಮಲೇಬೆನ್ನೂರು : ಎರೇಬೂದಿಹಾಳ್ ಗ್ರಾಮದ ಶ್ರೀ ಬಸವೇಶ್ವರ ದೇವರ ರಥೋತ್ಸವವು ಗುರುವಾರ ಸಂಜೆ ಶ್ರೀ ಆಂಜನೇಯ ಸ್ವಾಮಿ, ಶ್ರೀ ಮಾರಿಕಾಂಭ, ಶ್ರೀ ದುರ್ಗಮ್ಮ ದೇವರುಗಳು ಸಮ್ಮುಖದಲ್ಲಿ ಸಂಭ್ರಮದಿಂದ ಜರುಗಿತು.
ಹರಿಹರ : ಇಲ್ಲಿನ ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿದ್ದು, ನಗರಕ್ಕೆ ನೀರು ಪೂರೈಸುವ ಜಾಕ್ವೆಲ್ ಬಳಿ ಸಮರ್ಪಕ ನೀರು ನಿಲ್ಲುವಂತೆ ನಗರಸಭೆ ಪೌರಾಯುಕ್ತ ಐಗೂರು ಬಸವರಾಜ್ ಮತ್ತು ಜಲಸಿರಿ ಅಧಿ ಕಾರಿ ನವೀನ್ ಕುಮಾರ್ ಜೆಸಿಬಿಯಿಂದ ಗುಂಡಿ ತೆಗೆಸಿದರು.