ದಕ್ಷಿಣದಲ್ಲಿ ಬಿಜೆಪಿ ಕಾರ್ಯಾಲಯ ಉದ್ಘಾಟನೆ

ದಕ್ಷಿಣದಲ್ಲಿ ಬಿಜೆಪಿ ಕಾರ್ಯಾಲಯ ಉದ್ಘಾಟನೆ

ಬಿ.ಜಿ. ಅಜಯ್‌ಕುಮಾರ್ ಗೆಲುವಿಗೆ ಪಣ: ಯಶವಂತರಾವ್ ಜಾಧವ್

ದಾವಣಗೆರೆ, ಏ. 19-  ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಬಿ.ಜಿ. ಅಜಯ್‌ಕುಮಾರ್ ಗೆಲುವಿಗೆ  ನಾವೆಲ್ಲರೂ ಪಣ ತೊಟ್ಟಿದ್ದೇವೆ  ಎಂದು ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಯಶವಂತರಾವ್ ಜಾಧವ್ ತಿಳಿಸಿದ್ದಾರೆ.

ನಗರದ ಕಾಯಿಪೇಟೆಯಲ್ಲಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಾಲಯದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಬಿಜೆಪಿ ಎಲ್ಲಾ ಮುಖಂಡರು ಒಟ್ಟಿಗೆ ಸೇರಿ ಮನೆ ಮನೆಗೆ ಪಾದಯಾತ್ರೆ ಮೂಲಕ ಪ್ರಚಾರ ನಡೆಸಿ, ಅಜಯ್ ಕುಮಾರ್ ಪರ ಮತಯಾಚಿಸಲಾಗುವುದು ಎಂದರು.

ನಾಳೆ ದಿನಾಂಕ 20 ರಂದು  ಬೃಹತ್ ಮೆರವಣಿಗೆ ಮೂಲಕ ಎಲ್ಲಾ ಮುಖಂಡರ ನೇತೃತ್ವದಲ್ಲಿ ಹಿರಿಯರು, ಅಭಿಮಾನಗಳು ಜೊತೆ ಸೇರಿ ಅಜಯ್ ಕುಮಾರ್ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಅವರು ಹೇಳಿದರು. 

ಬಿಜೆಪಿ ಅಭ್ಯರ್ಥಿ ಬಿ.ಜಿ. ಅಜಯ್ ಕುಮಾರ್ ಮಾತನಾಡಿ, ಬಿಜೆಪಿ ಕಾರ್ಯಕರ್ತರ ಪಕ್ಷವಾಗಿದೆ. ಹಾಗಾಗಿ ಎಲ್ಲಾ ಕಾರ್ಯಕರ್ತರೂ ಸಹ ಸಂತೋಷದಿಂದ ದಕ್ಷಿಣ ಕ್ಷೇತ್ರದಲ್ಲಿ ಗೆಲುವಿಗಾಗಿ ಸಹಕರಿಸಲಿದ್ದಾರೆ. ಈ ನಿಟ್ಟಿನಲ್ಲಿ ಉತ್ಸಾಹದಿಂದ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ ಎಂದು ತಿಳಿಸಿದರು.

ಸಂಸದ ಜಿ.ಎಂ.ಸಿದ್ದೇಶ್ವರ, ಹಿರಿಯ ಶಾಸಕ ಎಸ್.ಎ. ರವೀಂದ್ರನಾಥ್ ಪಕ್ಷದ ಕಾರ್ಯಾಲಯದ ಉದ್ಘಾಟನೆ ನೆರವೇರಿಸಿ ಶುಭ ಕೋರಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಹನಗವಾಡಿ ವೀರೇಶ್, ಮುಖಂಡರುಗಳಾದ ವೈ. ಮಲ್ಲೇಶ್, ದೇವರಮನೆ ಶಿವಕುಮಾರ್, ಬಿ.ಎಂ. ಸತೀಶ್, ರಾಜನಹಳ್ಳಿ ಶಿವಕುಮಾರ್, ಶ್ರೀನಿವಾಸ್ ದಾಸಕರಿಯಪ್ಪ, ಹೆಚ್.ಎಂ. ರುದ್ರಮುನಿಸ್ವಾಮಿ, ನಗರ ಪಾಲಿಕೆ ಸದಸ್ಯರುಗಳಾದ ಸ್ವಾಗಿ ಶಾಂತ್ ಕುಮಾರ್, ಎಸ್.ಟಿ. ವೀರೇಶ್, ಆನಂದ್ ರಾವ್ ಸಿಂದೆ, ರಾಜು ನೀಲಗುಂದ್, ವಿಶ್ವಾಸ್, ಶಿವನಗೌಡ ಪಾಟೀಲ್, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಮಂಜುಳಾ ಮಹೇಶ್, ಹೆಚ್.ಸಿ. ಜಯಮ್ಮ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

error: Content is protected !!