ಹರಿಹರ : ಕಾಂಗ್ರೆಸ್ ಟಿಕೆಟ್ ವಂಚಿತರು ತಟಸ್ಥ

ಮಲೇಬೆನ್ನೂರು, ಏ. 19 – ಹರಿಹರ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಾಗಿದ್ದ ಶಾಸಕ ಎಸ್. ರಾಮಪ್ಪ ಮತ್ತು ಜಿ.ಪಂ. ಮಾಜಿ ಸದಸ್ಯ ಎಂ. ನಾಗೇಂದ್ರಪ್ಪ ಸೇರಿ 8 ಜನರು ಟಿಕೆಟ್ ಕೈ ತಪ್ಪಿದ್ದಕ್ಕೆ ಇದುವರೆಗೆ ಯಾವ ಪ್ರತಿಕ್ರಿಯೆ ನೀಡದೆ ಸದ್ಯ ತಟಸ್ಥರಾಗಿದ್ದಾರೆ.

ಕಾಂಗ್ರೆಸ್ ಟಿಕೆಟ್ ಪಡೆದಿರುವ ನಂದಿಗಾವಿ ಶ್ರೀನಿವಾಸ್ ಅವರು ಗುರುವಾರ ನಾಮಪತ್ರ ಸಲ್ಲಿಸ ಲ್ಲಿದ್ದು, ಬುಧವಾರ ಪಕ್ಷದ ಮುಖಂಡರು, ಕಾರ್ಯ ಕರ್ತರನ್ನು ಸಂಪರ್ಕಿಸುವ ಪ್ರಯತ್ನ ಮಾಡಿದ್ದಾರೆ. ಅಲ್ಲದೇ ನಾಮಪತ್ರ ಸಲ್ಲಿಸುವ ಕಾರ್ಯಕ್ರಮಕ್ಕೆ ಜನರನ್ನು ಕರೆತರುವ ವ್ಯವಸ್ಥೆ ಮಾಡಿದ್ದಾರೆ. ಟಿಕೆಟ್ ಕೈ ತಪ್ಪಿರುವುದಕ್ಕೆ ತೀವ್ರ ಬೇಸರಗೊಂಡಿರುವ ಶಾಸಕ ರಾಮಪ್ಪ ಅವರು ಇನ್ನೂ ಬೆಂಗಳೂರಿನಲ್ಲಿಯೇ ಇದ್ದು ಗುರುವಾರ ಹರಿಹರಕ್ಕೆ ಬರುವ ಸಾಧ್ಯತೆ ಇದೆ ಎಂದು ಅವರ ಆಪ್ತ ಬಳಗ ತಿಳಿಸಿದೆ.

ಎಂ. ನಾಗೇಂದ್ರಪ್ಪ ಅವರು ಹರಿಹರದಲ್ಲಿಯೇ ಇದ್ದು, ತಮ್ಮನ್ನು ಭೇಟಿ ಮಾಡಿದ ಜನರೊಂದಿಗೆ ಮಾತುಕತೆ ನಡೆಸಿದ್ದಾರೆ. ಆದರೆ, ಇದುವರೆಗೂ ಯಾರೂ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸೂಚನೆ ನೀಡದಿರುವುದು ವಿಶೇಷವಾಗಿದೆ.  

error: Content is protected !!