ಕಾಯಿಪೇಟೆ ಶ್ರೀ ಬಸವೇಶ್ವರ ನಗರದಲ್ಲಿರುವ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಶ್ರೀ ಬಸವೇಶ್ವರ ಜಯಂತ್ಯೋತ್ಸವ ಇಂದು ನಡೆಯಲಿದೆ.
ಇಂದು ಮುಂಜಾನೆ 6 ಗಂಟೆಗೆ ತೊಟ್ಟಿಲು ಪೂಜೆ, ಸಂಜೆ 7 ಗಂಟೆಗೆ ವಿದ್ಯುತ್ ಅಲಂಕೃತವಾದ ಭವ್ಯವಾದ ಹೂವಿನ ಮಂಟಪದಲ್ಲಿ ಶ್ರೀ ಬಸವೇಶ್ವರ ಮೂರ್ತಿಯ ಮೆರವಣಿಗೆ ರಾಜಬೀದಿಗಳಲ್ಲಿ ಜರುಗಲಿದೆ.
ಬಸವ ಜಯಂತಿ ಪ್ರಯುಕ್ತ ನಾಡಿದ್ದು ದಿನಾಂಕ 24ರ ಸೋಮವಾರ ಸರ್ವ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ ಎಂದು ಶ್ರೀ ಬಸವೇಶ್ವರ ದೇವಸ್ಥಾನ ಸೇವಾ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.