ದಾವಣಗೆರೆ, ಏ. 26 – ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಶ್ರೀ ಶಂಕರಚಾರ್ಯರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲಾಯಿತು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುರೇಶ್ ಹಿಟ್ನಾಳ್, ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣಾ ಇಲಾಖೆಯ ಉಪ ನಿರ್ದೇಶಕರಾದ ವಾಸಂತಿ ಉಪ್ಪಾರ್, ಜಿಲ್ಲಾ ಶಂಕರ ಸೇವಾ ಸಂಘದ ಅಧ್ಯಕ್ಷ ಡಾ.ಬಿ.ಟಿ. ಅಚ್ಚುತ್, ಉಪಾಧ್ಯಕ್ಷ ಗಿರೀಶ್ ನಾಡಿಗ್, ವಿನಾಯಕ ಜೋಶಿ, ಬಾಲಕೃಷ್ಣ ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.
ಜಿಲ್ಲಾಡಳಿತದಿಂದ ಶ್ರೀ ಶಂಕರಾಚಾರ್ಯರ ಜಯಂತಿ ಆಚರಣೆ
![12 shanakara jayanthi 27.034.2023 ಜಿಲ್ಲಾಡಳಿತದಿಂದ ಶ್ರೀ ಶಂಕರಾಚಾರ್ಯರ ಜಯಂತಿ ಆಚರಣೆ](https://janathavani.com/wp-content/uploads/2023/04/12-shanakara-jayanthi-27.034.2023-860x432.jpg)