ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಶಾರದಾ ಪುರಸ್ಕಾರ

ದಾವಣಗೆರೆ, ಮೇ 21- ಶ್ರೀಮತಿ ಪ್ರೇಮಾ ಅರುಣಾಚಲ ಎನ್. ರೇವಣಕರ್ ಪ್ರತಿಷ್ಠಾನದಿಂದ ದೈವಜ್ಞ ಸಮಾಜ ಬಾಂಧವರ ಪ್ರತಿಭಾವಂತ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಅವರ ಮುಂದಿನ ವಿದ್ಯಾಭ್ಯಾಸಕ್ಕೆ ಪ್ರೇರಣೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ರಾಜ್ಯ ಮಟ್ಟದ `ಶಾರದಾ ಪುರಸ್ಕಾರ-2023′ ನೀಡಲಾಗುವುದು ಎಂದು ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀಮತಿ ಪ್ರೇಮಾ ಅರುಣಾಚಲ ಎನ್.ರೇವಣಕರ್ ತಿಳಿಸಿದ್ದಾರೆ.

2022-23ನೇ ಸಾಲಿನ ಶೈಕ್ಷಣಿಕ ವರ್ಷದ ರಾಜ್ಯ ಪಠ್ಯಕ್ರಮ (ಸ್ಟೇಟ್ ಸಿಲೆಬಸ್) ಎಸ್.ಎಸ್.ಎಲ್.ಸಿ. ಸಾರ್ವಜನಿಕ ಪರೀಕ್ಷೆಯಲ್ಲಿ ಶೇ. 85 ರಷ್ಟು ಮತ್ತು ಅದಕ್ಕೂ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಈ ಪ್ರಶಸ್ತಿ ವಿತರಿಸಲಾಗುತ್ತಿದೆ. 

ವಿವರಕ್ಕೆ ನಲ್ಲೂರು ಅರುಣ್ ಜ್ಯೂಯಲರ್‌ (9341969084, 9481359009) ಅಥವಾ ನಲ್ಲೂರು ಲಕ್ಷ್ಮಣ ಜ್ಯೂಯಲರ್‌ ಇಲ್ಲಿಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಸಂಸ್ಥಾಪಕ ನಲ್ಲೂರು ಅರುಣಾಚಲ ಎನ್.ರೇವಣಕರ್ ತಿಳಿಸಿದ್ದಾರೆ. ಪ್ರವೇಶ ಪತ್ರ ಪಡೆದು ಭರ್ತಿ ಮಾಡಿ ಕಛೇರಿಗೆ ತಲುಪಿಸುವ ಕೊನೆಯ ದಿನಾಂಕ 20-05-2023.

error: Content is protected !!