ಕಟ್ಟಡ ಕಾರ್ಮಿಕರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ

ದಾವಣಗೆರೆ, ಮೆ 21 –  ಸಾಗರ ಕಟ್ಟಡ ಮತ್ತು ಇತರೆ ಕಾರ್ಮಿಕರ ಸಂಘಟನೆ ವತಿಯಿಂದ 2022-23 ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಂಘಟ ನೆಯ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸ ಲಾಗಿದೆ.  ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ ಹೆಚ್ಚು ಅಂಕ ಪಡೆದ ಕಟ್ಟಡ ಕಾರ್ಮಿಕರ ಮಕ್ಕಳು ಗೂಗಲ್ ಫಾರ್ಮ್ ಮುಖಾಂತರ ಅಥವಾ ಕೈ ಬರಹದ ಅರ್ಜಿ ಯೊಂದಿಗೆ ಕಟ್ಟಡ ಕಾರ್ಮಿಕರ ಕಾರ್ಡ್, ವಿದ್ಯಾರ್ಥಿಯ ಅಂಕಪಟ್ಟಿ, ವಿದ್ಯಾರ್ಥಿಯ ಭಾವಚಿತ್ರವಿರುವ ದಾಖಲೆಯೊಂದಿಗೆ ನಗರದ ಶಿವನಗರ ಮುಖ್ಯ ರಸ್ತೆಯ ಶಾದಿ ಮಹಲ್ ಮಳಿಗೆಯಲ್ಲಿರುವ ಸಂಘದ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಮೊ: 70190 10510 ಮತ್ತು 63603 63625 ಸಂಪರ್ಕಿಸಬಹುದಾಗಿದೆ.

error: Content is protected !!