ಚಳ್ಳಕೆರೆ, ಮೇ 26- ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮದಡಿಯಲ್ಲಿ ಕಮ್ಯುನಿಟಿ ಎಂಗೇಜ್ಮೆಂಟ್ ಕಾರ್ಯಕ್ರಮವನ್ನು ತಾಲ್ಲೂಕಿನ ಕರೀಕೆರೆ ಗ್ರಾಮದಲ್ಲಿ ಕ್ಷಯಮುಕ್ತ ಗ್ರಾಮ ಮಾಡುವ ಸಲುವಾಗಿ ಹಾಗೂ ಕ್ಷಯರೋಗದ ಬಗ್ಗೆ ಜಾಗೃತಿ, ಜನರಿಗೆ ಕ್ಷಯ ರೋಗದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮವನ್ನು ಉದ್ದೇಶಿಸಿ ಆಡಳಿತ ವೈದ್ಯಾಧಿಕಾರಿ ಡಾ. ಗುರುಪ್ರಸಾದ್ ಅವರು ಕ್ಷಯ ರೋಗದ ಲಕ್ಷಣಗಳು, ಹರಡುವ ವಿಧಾನ, ಚಿಕಿತ್ಸೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಆರೋಗ್ಯ ಶಿಕ್ಷಣ ನೀಡಿ ಜನರಿಗೆ ಅರಿವು ಮೂಡಿಸಿದರು.
ಈ ಸಂದರ್ಭದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿ ಸಿ.ಎನ್. ನವೀನ್ಕುಮಾರ್, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಕೆ. ಸುಲೋಚನಾ, ಸಮುದಾಯ ಆರೋಗ್ಯ ಅಧಿಕಾರಿ ಕೆ. ಸ್ನೇಹಾ, ಆಶಾ ಕಾರ್ಯಕರ್ತರು, ಆರ್. ಭಾಗ್ಯಮ್ಮ, ಎಂ.ಟಿ. ಭಾಗ್ಯಮ್ಮ, ಗ್ರಾಮದ ಮುಖಂಡ ಈರಣ್ಣ, ಸ್ವಸಹಾಯ ಸಂಘದ ಮಹಿಳೆಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.