ನಗರದ ಬಾಪೂಜಿ ಕಾಲೇಜ್ ಆಫ್ ನರ್ಸಿಂಗ್, ಬಾಪೂಜಿ ಸ್ಕೂಲ್ ಆಫ್ ನರ್ಸಿಂಗ್ ಇವರುಗಳ ಸಂಯುಕ್ತಾಶ್ರಯದಲ್ಲಿ ಬಿ.ಎಸ್ಸಿ ನರ್ಸಿಂಗ್ ಮತ್ತು ಜಿಎನ್ಎಂ ವಿದ್ಯಾರ್ಥಿಗಳ ದೀಪ ಬೆಳಗಿಸುವ ಕಾರ್ಯಕ್ರಮ ಹಾಗೂ ಪ್ರತಿಜ್ಞಾ ವಿಧಿ ಸ್ವೀಕರಿಸುವ ಕಾರ್ಯಕ್ರಮ ಇಂದು ಬೆಳಿಗ್ಗೆ 10.30 ಕ್ಕೆ ಕಾಲೇಜಿನ ಮಲ್ಟಿ ಪರ್ಪಸ್ ಹಾಲ್, 2ನೇ ಮಹಡಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಮತ್ತು ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಮುಖ್ಯ ಪೋಷಕರಾಗಿರುತ್ತಾರೆ.
ಮುಖ್ಯ ಅತಿಥಿಗಳಾಗಿ ಡಾ. ಪ್ರಭಾ ಮಲ್ಲಿಕಾರ್ಜುನ್ ಮತ್ತು ಸಂಪಣ್ಣ ಮುತಾಲಿಕ್ ಆಗಮಿಸುವರು. ವಿಶೇಷ ಆಹ್ವಾನಿತರಾಗಿ ಡಾ. ಅಶ್ವಿನಿ ಎಸ್. ಆಗಮಿಸುವರು. ಅಧ್ಯಕ್ಷತೆಯನ್ನು ಬಾಪೂಜಿ ಕಾಲೇಜ್ ಆಫ್ ನರ್ಸಿಂಗ್ನ ಪ್ರಾಂಶುಪಾಲರಾದ ಹರ್ಷ ಕೆ.ಎಂ. ಹಾಗೂ ಬಾಪೂಜಿ ಸ್ಕೂಲ್ ಆಫ್ ನರ್ಸಿಂಗ್ನ ಪ್ರಾಂಶುಪಾಲರಾದ ಶ್ರೀಮತಿ ನರ್ಮದ ವಹಿಸುವರು.