ಜಿಲ್ಲೆಯ ವಿವಿಧೆಡೆಗಳಲ್ಲಿ ಅಕ್ರಮ ಮರಳು ವಶ

ದಾವಣಗೆರೆ, ಮೇ 29-ಜಿಲ್ಲೆಯ ವಿವಿಧೆಡೆ ಅಕ್ರಮವಾಗಿ ಸಂಗ್ರಹಿಸಿಟ್ಟುಕೊಂಡಿದ್ದ ಮರಳನ್ನು ವಶಪಡಿಸಿಕೊಂಡಿರುವ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಜಗಳೂರು ತಾಲ್ಲೂಕು ಬಸವನಕೋಟೆ ಗ್ರಾಮದ ಗಣವೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಸುಮಾರು 25 ಟ್ರ್ಯಾಕ್ಟರ್ ಲೋಡ್ ಮರಳನ್ನು  ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಹೊನ್ನಾಳಿ ತಾಲ್ಲೂಕು ಬುಳ್ಳಾಪುರ ಗ್ರಾಮದಲ್ಲಿ ತಂಗಭದ್ರಾ ನದಿ ದಂಡೆಯ ಮೇಲೆ ನದಿಯಿಂದ ಯಾವುದೇ ಪರವಾನಗಿ ಪಡೆಯದೆ ತಂಡ ಸುಮಾರು 25 ಟಿಪ್ಪರ್ ಲಾರಿ ಮರಳನ್ನು ಅಕ್ರಮವಾಗ ಸಂಗ್ರಹ ಮಾಡಿಟ್ಟಿರುವುದನ್ನು ಪತ್ತೆ ಹಚ್ಚಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬುಳ್ಳಾಪುರ ಗ್ರಾಮದ ಜಮೀನೊಂದರಲ್ಲಿ ಅಕ್ರಮವಾಗಿ ಸಂಗ್ರಹಿಡಲಾಗಿದ್ದ 40-50 ಟಿಪ್ಪರ್ ಲಾರಿ ಮರಳು  ಹಾಗೂ ಇದೇ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಕ್ರಮವಾಗಿ ಸಂಗ್ರಹಿಸಿಟ್ಟಿದ್ದ 10-15 ಟ್ರ್ಯಾಕ್ಟರ್ ಲೋಡ್‌ಗಳನ್ನು ಮರಳನ್ನೂ  ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಸಾಸ್ವೆಹಳ್ಳಿ ಗ್ರಾಮದಲ್ಲೂ ಸಹ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 4-5 ಟಿಪ್ಪರ್ ಲಾರಿ ಮರಳನ್ನು ವಶಪಡಿಸಿಕೊಳ್ಳಲಾಗಿದೆ. 

error: Content is protected !!