ಪಂಚಮಸಾಲಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ದಾವಣಗೆರೆ, ಜೂ. 11-ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ದಾವಣಗೆರೆ ಜಿಲ್ಲಾ ಘಟಕದ ವತಿಯಿಂದ 2023ನೇ ಸಾಲಿನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿ.ಯು.ಸಿ. ಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾದ ದಾವಣಗೆರೆ ಜಿಲ್ಲೆಯ ಪಂಚಮಸಾಲಿ ಸಮಾಜದ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಂದ `ಸ್ವಾಭಿಮಾನ ಪ್ರತಿಭಾ ಪುರಸ್ಕಾರ’ಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಶೇ.90 ಕ್ಕಿಂತ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳು ದಾವಣಗೆರೆ ಜಿಲ್ಲಾ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಕಛೇರಿ  ಯಲ್ಲಿ ಅಥವಾ ಸಮಾಜದ ಅಂತರ್ಜಾಲವಾದ ವೆಬ್‍ಸೈಟ್www.panchamasali.org ನಲ್ಲಿ ಅರ್ಜಿ  ಪಡೆದು, ಅರ್ಜಿಯಲ್ಲಿ ಕೇಳಿರುವ ಅಗತ್ಯ ಮಾಹಿತಿಗಳೊಂದಿಗೆ ಮೇಲ್ಕಂಡ ಕಛೇರಿಗಳಿಗೆ ಇದೇ ದಿನಾಂಕ 25 ರೊಳಗಾಗಿ ಸಲ್ಲಿಸಬೇಕು. ಮಾಹಿತಿಗಾಗಿ ದೂರವಾಣಿ (08192) 222008 ಸಂಪರ್ಕಿಸಬಹುದು.

error: Content is protected !!