ಮಾಯಕೊಂಡದಲ್ಲಿ ಅಹವಾಲು ಆಲಿಸಿದ ಶಾಸಕ ಬಸವಂತಪ್ಪ

ಮಾಯಕೊಂಡದಲ್ಲಿ ಅಹವಾಲು ಆಲಿಸಿದ ಶಾಸಕ ಬಸವಂತಪ್ಪ

ಮಾಯಕೊಂಡ, ಜೂ. 12- ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ, ಮತದಾರರಿಗೆ ಕೃತಜ್ಞತೆ ಸಲ್ಲಿಸಿ, ಅಹವಾಲು ಆಲಿಸಿದರು.

ಕ್ಷೇತ್ರದ ಮತದಾರರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸುವುದನ್ನು ಮುಂದುವರೆಸಿರುವ ಮಾಯ ಕೊಂಡ ಶಾಸಕ ಕೆ.ಎಸ್. ಬಸವಂತಪ್ಪ, ಅಭಿನಂದನೆ ಸಲ್ಲಿಸುವ ಜೊತೆಗೆ ಅವರ ಸಮಸ್ಯೆಗಳನ್ನು ಆಲಿಸುವ ಮೂಲಕ ಸಮಸ್ಯೆ ಪರಿಹರಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಹಿಂಡಸಕಟ್ಟೆ, ಅಣಬೇರು, ನಲ್ಕುಂದ, ಎಚ್.ಬಸಾಪುರ, ಕ್ಯಾತನಹಳ್ಳಿ, ಹುಚ್ಚವ್ವನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಮೂಲಕ ಅವರ ಸಮಸ್ಯೆಗಳನ್ನು ಆಲಿಸುತ್ತಾ ಸ್ಥಳದಲ್ಲೇ ಪರಿಹಾರ ನೀಡುವ ಕೆಲಸದಲ್ಲಿ ತೊಡಗಿದ್ದಾರೆ.

ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಮಸ್ಥರು  ಅಹವಾಲುಗಳನ್ನು ಸಲ್ಲಿಸುತ್ತಿದ್ದು, ತ್ವರಿತವಾಗಿ ಬಗೆಹರಿಯುವ ಅಹವಾಲುಗಳಿ ದ್ದರೆ, ಸ್ಥಳದಲ್ಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ ಪರಿಹರಿಸುತ್ತಿದ್ದಾರೆ. ಬಗೆಹರಿಯದ ಸಮಸ್ಯೆಗಳಿದ್ದರೆ ಅವುಗಳನ್ನು ಕಾಲಮಿತಿಯಲ್ಲಿ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡುತ್ತಿದ್ದಾರೆ. ಕೆಲವು ಗ್ರಾಮಗಳಿಗೆ ಭೇಟಿ ನೀಡಿದಾಗ ರೈತರು ವಿದ್ಯುತ್ ಸಮಸ್ಯೆ ಕುರಿತು ಅಹವಾಲು ಸಲ್ಲಿಸಿದರೆ, ಬಸ್ ಸೌಲಭ್ಯ ಇಲ್ಲದಿರುವ ಗ್ರಾಮಗಳಿಗೆ ಬಸ್ ಸೌಲಭ್ಯ ಕಲ್ಪಿಸುವಂತೆ ಗ್ರಾಮಸ್ಥರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಾಯಕೊಂಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಟಿ. ಹನುಮಂತಪ್ಪ, ಜಿಪಂ ಮಾಜಿ ಸದಸ್ಯ ವೆಂಕಟೇಶ್, ಕಾಂಗ್ರೆಸ್ ಮುಖಂಡ ಮಾದಪ್ಪ,
ಬಾಡದ ರುದ್ರಸ್ವಾಮಿ, ಆರ್.ಜಿ.ಹಳ್ಳಿ ಮಲ್ಲಿಕಣ್ಣ, ಮಾಯಕೊಂಡ ರುದ್ರೇಶ್, ಹೆದ್ನೆ ರಾಜೇಂದ್ರಣ್ಣ, ಮಾಯಕೊಂಡ ಗೋಪಾಲಣ್ಣ ಸೇರಿದಂತೆ ಕಾಂಗ್ರೆಸ್ ಮುಖಂಡರು ಇದ್ದರು.

error: Content is protected !!