ಬೆಳ್ಳೂಡಿ – ರಾಮತೀರ್ಥ ಸಂಪರ್ಕ ಸೇತುವೆ ನಿರ್ಮಾಣಕ್ಕೆ ಶೀಘ್ರ ಚಾಲನೆ

ಬೆಳ್ಳೂಡಿ – ರಾಮತೀರ್ಥ ಸಂಪರ್ಕ ಸೇತುವೆ ನಿರ್ಮಾಣಕ್ಕೆ ಶೀಘ್ರ ಚಾಲನೆ

ಮಲೇಬೆನ್ನೂರು,ಜೂ. 13-  ಕಳೆದ ವರ್ಷ ಸುರಿದ ಭಾರೀ ಮಳೆಯಿಂದಾಗಿ ಕೊಚ್ಚಿ ಹೋಗಿದ್ದ ಜನರ ಸಂಚಾರಕ್ಕೆ ತೀವ್ರ ತೊಂದರೆಯಾಗಿರುವ ಬೆಳ್ಳೂಡಿ -ರಾಮತೀರ್ಥ ಸಂಪರ್ಕ ಸೇತುವೆ ನಿರ್ಮಾಣ ಕಾಮಗಾರಿಯನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಕಾಂಗ್ರೆಸ್ ಮುಖಂಡ ನಂದಿಗಾವಿ ಶ್ರೀನಿವಾಸ್ ಅವರು ಮಂಗಳವಾರ ಬೆಂಗಳೂರಿನಲ್ಲಿ ಪಂಚಾಯತ್ ರಾಜ್ ಹಾಗೂ ಗ್ರಾಮೀಣ ಅಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿ ಮಾಡಿ ಮನವಿ ಮಾಡಿದರು.

ಮನವಿಗೆ ಸ್ಪಂದಿಸಿದ ಸಚಿವರು ತಕ್ಷಣ ಕಾಮಗಾರಿ ಕೈಗೊಳ್ಳಲು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

error: Content is protected !!