ಹರಪನಹಳ್ಳಿ, ಜೂ. 18- ಪಟ್ಟಣದ ಟಿ.ಎಂ.ಎ.ಇ ಸಂಸ್ಥೆಯ ಕಟ್ಟಿ ಸೇತುರಾಮಾಚಾರಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಟಿ.ಎಂ. ರಾಜಶೇಖರ್ ಅವರನ್ನು ಬಳ್ಳಾರಿ ಜಿಲ್ಲೆ ವಿಜಯನಗರ ಶ್ರೀ ಕೃಷ್ಣ ದೇವರಾಯ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರನ್ನಾಗಿ ನೇಮಕ ಮಾಡಿ ಕುಲಸಚಿವ ಎಸ್.ಸಿ. ಪಾಟೀಲ್ ಆದೇಶಿಸಿದ್ದಾರೆ.
ಜೂನ್ 15ರಿಂದ ಒಂದು ವರ್ಷ ಅಥವಾ ಮುಂದಿನ ಆದೇಶದವರೆಗೂ ಸಿಂಡಿಕೇಟ್ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಟಿ.ಎಂ. ರಾಜಶೇಖರ್ ಸಿಂಡಿಕೇಟ್ ಸದಸ್ಯರಾಗಿ ಆಯ್ಕೆಯಾಗಿರುವುದಕ್ಕೆ ತೆಗ್ಗಿನಮಠ ಸಂಸ್ಥಾನದ ಪೀಠಾಧ್ಯಕ್ಷ ಷ.ಬ್ರ.ಶ್ರೀ ವರಸದ್ಯೋಜಾತ ಶಿವಚಾರ್ಯ ಮಹಾಸ್ವಾಮಿಜೀ, ಕಾರ್ಯದರ್ಶಿ ಟಿ.ಎಂ.ಚಂದ್ರಶೇಖರಯ್ಯ ಮತ್ತು ಕಾಲೇಜಿನ ಉಪನ್ಯಾಸಕರು ಹಾಗೂ ಆಡಳಿತ ಮಂಡಳಿಯವರು ಶುಭ ಹಾರೈಸಿದ್ದಾರೆ.