ಹರಿಹರ : ಪರಿಶಿಷ್ಟರಿಗೆ ಗ್ರಾ.ಪಂ. ಅಧ್ಯಕ್ಷ ಸ್ಥಾನ ಮೀಸಲಿಡಲು ಮನವಿ

ಹರಿಹರ : ಪರಿಶಿಷ್ಟರಿಗೆ ಗ್ರಾ.ಪಂ.  ಅಧ್ಯಕ್ಷ ಸ್ಥಾನ ಮೀಸಲಿಡಲು ಮನವಿ

ಹರಿಹರ, ಜೂ. 21 – ತಾಲ್ಲೂಕಿನ ಹರಳಹಳ್ಳಿ, ಕೆ.ಬೇವಿನಹಳ್ಳಿ ಹಾಗೂ ಭಾನುವಳ್ಳಿ ಗ್ರಾಮ ಪಂಚಾಯ್ತಿಗಳ ಅಧ್ಯಕ್ಷ ಸ್ಥಾನವನ್ನು ಮುಂದಿನ 30 ತಿಂಗಳ ಅವಧಿಗೆ ಪರಿಶಿಷ್ಟ ಜಾತಿಗೆ ಮೀಸಲು ನಿಗದಿ ಮಾಡಲು ಆಗ್ರಹಿಸಿ, ದಲಿತ ಸಂಘರ್ಷ ಸಮಿತಿಯಿಂದ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ಆಗ್ರಹಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಇವರಿಗೆ ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ಹರಿಹರ ತಾಲ್ಲೂಕು ಸಂಚಾಲಕ ಪಿ.ಜೆ.ಮಹಾಂತೇಶ್, ಕೆ.ಬೇವಿನಹಳ್ಳಿ ಗ್ರಾಪಂ ಸದಸ್ಯರಾದ ಟಿ.ಕೆ.ಮಹೇಶ್, ಕಡ್ಲೆಗೊಂದಿ ತಿಮ್ಮಣ್ಣ, ಹರಳಹಳ್ಳಿ ಗ್ರಾಪಂ ಸದಸ್ಯ ಮಂಜಪ್ಪ, ಎನ್.ಆರ್.ಅರವಿಂದ, ಕೆ.ಎನ್.ಹೇಮಂತ್ ಮತ್ತಿತರರು ಉಪಸ್ಥಿತರಿದ್ದರು.

error: Content is protected !!