ಕುಂಬಳೂರಿನಲ್ಲಿ ಇಂದು ಶಾಲಾ ಕೊಠಡಿಗಳ ಉದ್ಘಾಟನೆ

ಮಲೇಬೆನ್ನೂರು ಸಮೀಪದ ಕುಂಬಳೂರು ಗ್ರಾಮದಲ್ಲಿ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಆಶ್ರಯದಲ್ಲಿ ನಡೆಯುತ್ತಿರುವ ಬಸವ ಗುರುಕುಲ ಶಾಲೆಗಳ ಆವರಣದಲ್ಲಿ ಈ ಶಾಲೆಯ ಹಳೆಯ ವಿದ್ಯಾರ್ಥಿ ಹಾಗೂ ಗುತ್ತಿಗೆದಾರ ವಿನಾಯಕ ನಗರ ಕ್ಯಾಂಪಿನ ಸಿ.ಹೆಚ್. ರವಿ ಅವರು ಕೊಡುಗೆಯಾಗಿ ನಿರ್ಮಿಸಿರುವ 4 ಕೊಠಡಿ ಮತ್ತು ಸಂಸದರ, ಶಾಸಕರ, ವಿಧಾನ ಪರಿಷತ್ ಸದಸ್ಯರ ಅನುದಾನದಲ್ಲಿ ನಿರ್ಮಿಸಿರುವ 4 ಕೊಠಡಿಗಳ ಉದ್ಘಾಟನಾ ಸಮಾರಂಭವನ್ನು ಇಂದು ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ಸಾಣೇಹಳ್ಳಿ ಶಾಖಾ ಮಠದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಜರುಗುವ ಈ ಸಮಾರಂಭದ ಅಧ್ಯಕ್ಷತೆಯನ್ನು ಬಸವ ಗುರುಕುಲ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಕೆ. ತೀರ್ಥಪ್ಪ ವಹಿಸುವರು.

ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕರಾದ ಬಿ.ಪಿ. ಹರೀಶ್, ಡಿ.ಜಿ. ಶಾಂತನಗೌಡ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್. ನವೀನ್,  ಮೋಹನಕುಮಾರ್ ಕೊಂಡಜ್ಜಿ,  ರುದ್ರೇಗೌಡ್ರು, ಮಾಜಿ ಶಾಸಕ ಹೆಚ್.ಎಸ್. ಶಿವಶಂಕರ್, ಗುತ್ತಿಗೆದಾರ ಹಾಗೂ  ದಾನಿ ಸಿ.ಹೆಚ್. ರವಿ, ಗ್ರಾ.ಪಂ. ಅಧ್ಯಕ್ಷೆ ಲೀಲಾ ಶಿವಕುಮಾರ್ ಮತ್ತು ಹರಿಹರದ ಶಕುಂತಲಮ್ಮ, ಡಿಡಿಪಿಐ ಜಿ.ಆರ್. ತಿಪ್ಪೇಶಪ್ಪ,  ಬಿಇಓ ಹನುಮಂತಪ್ಪ ಸೇರಿದಂತೆ, ಇನ್ನೂ ಅನೇಕರು ಭಾಗವಹಿಸಲಿದ್ದಾರೆಂದು ಬಸವ ಗುರುಕುಲ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಹಳೇಮನಿ ಶಂಭುಲಿಂಗಪ್ಪ ತಿಳಿಸಿದ್ದಾರೆ. 

error: Content is protected !!