ಇಂದು ಸಾಲುಮರದ ವೀರಾಚಾರಿ ಸ್ಮರಣೋತ್ಸವ

ಪರಿಸರ ಸಂರಕ್ಷಣೆ ವೇದಿಕೆ ಮತ್ತು ಮಿಟ್ಲಕಟ್ಟೆ ಗ್ರಾಮಸ್ಥರ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಹಾಗೂ ಸಾಲುಮರದ ವೀರಾಚಾರಿ ಸ್ಮರಣೋತ್ಸವ ಕಾರ್ಯಕ್ರಮವನ್ನು ಇಂದು 24ರಂದು ಬೆಳಿಗ್ಗೆ 10.15 ಕ್ಕೆ ಹರಿಹರ ತಾಲ್ಲೂಕಿನ ಮಿಟ್ಲಕಟ್ಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದಿ.ಸಾಲುಮರದ ವೀರಾಚಾರಿ ಅವರ ನಿವಾಸಕ್ಕೆ ರಾಜ್ಯ ಸರ್ಕಾರದ ಪರಿಸರ ರಾಯಭಾರಿ, ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ, ರಾಷ್ಟ್ರೀಯ ಪರಿಸರ ಪ್ರಶಸ್ತಿ ಪುರಸ್ಕೃತ ಬಳ್ಳೂರು ಉಮೇಶ್‌ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ. ನಂತರ ಮಿಟ್ಲಕಟ್ಟೆ ಗ್ರಾಮದ ಸಸಿ ನೆಡುವ ಮೂಲಕ ಸ್ಮರಣೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮಕ್ಕೆ ಅರಣ್ಯ ಅಧಿಕಾರಿಗಳು, ಗಣ್ಯರು, ಜನಪ್ರತಿನಿಧಿಗಳು ಪರಿಸರ ಪ್ರೇಮಿಗಳು, ಮಿಟ್ಟಕಟ್ಟೆ ಗ್ರಾಮಸ್ಥರು, ಭಾಗವಹಿಸಲಿದ್ದಾರೆ ಎಂದು ವೇದಿಕೆ ಅಧ್ಯಕ್ಷ ಗಿರೀಶ್ ಎಸ್. ದೇವರಮನೆ ತಿಳಿಸಿದ್ದಾರೆ.

error: Content is protected !!