ಉತ್ತಮ ಮಳೆ, ಜಲಪ್ರಳಯ ಸಾಧ್ಯತೆ

ಉತ್ತಮ ಮಳೆ, ಜಲಪ್ರಳಯ ಸಾಧ್ಯತೆ

ಹುಬ್ಬಳ್ಳಿ, ಜು. 1- ಬರುವ ದಿನಗಳಲ್ಲಿ ಉತ್ತಮ ಮಳೆಯಾಗಲಿದ್ದು, ಜಲಪ್ರಳಯ ಆಗುವ ಲಕ್ಷಣಗಳಿವೆ. ಎಂದು ಕೋಡಿಮಠ ಮಹಾ ಸಂಸ್ಥಾನದ ಪೀಠಾಧ್ಯಕ್ಷ ಶ್ರೀ ಶಿವಾ ನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಜಾಗತಿಕ ಮಟ್ಟದಲ್ಲಿ ಜಲಪ್ರಳಯ ಸಂಭವಿಸಿ ಒಂದೆರಡು ರಾಷ್ಟ್ರಗಳು ಮುಳು ಗುವ ಸಾಧ್ಯತೆ ಇದೆ ಎಂದು ಕೋಡಿಮಠ ಮಹಾಸಂಸ್ಥಾನದ ಪೀಠಾಧ್ಯಕ್ಷ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಬೇರೆ ಎಲ್ಲೋ ಬಾಂಬ್‌ ಸ್ಫೋಟದಂತಹ ಘಟನೆಗಳು ಸಂಭವಿಸಿ ವಿಷಾನಿಲದಿಂದ ಭಾರತದಲ್ಲಿ ಜನರು ಅಕಾಲಿಕವಾಗಿ ಸಾವನ್ನಪ್ಪುವ ಸಂಭವ ಇದೆ  ಎಂದರು.

ವಿಜಯದಶಮಿಯಿಂದ ಸಂಕ್ರಾಂತಿ ಯೊ ಳಗೆ ಜಗತ್ತಿನ ಸಾಮ್ರಾಟರು ತಲ್ಲಣಗೊಳ್ಳು ವಂತಹ ದುರ್ಘಟನೆ ರಾಷ್ಟ್ರಮಟ್ಟದಲ್ಲಿ ನಡೆಯಲಿದೆ. ಆಳುವವರು ಅರಿತರೆ ಇದರಿಂದ ಪಾರಾಗಬಹುದು. ಕರುನಾಡಿಗೂ ಕೆಲವು ಆಪತ್ತುಗಳು ಇದ್ದು, ಸಾವು-ನೋವುಗಳು ಸಂಭವಿಸಲಿವೆ ಎಂದರು. ದೈವಕೃಪೆಯಿಂದ ಇವೆಲ್ಲವೂ ಪಾರಾಗುತ್ತವೆ  ಎಂದು ಹೇಳಿದರು.

error: Content is protected !!