ಹರಪನಹಳ್ಳಿಯಲ್ಲಿ ಹಡಪದ ಅಪ್ಪಣ್ಣ ಜಯಂತಿ ಆಚರಣೆ

ಹರಪನಹಳ್ಳಿಯಲ್ಲಿ ಹಡಪದ ಅಪ್ಪಣ್ಣ ಜಯಂತಿ ಆಚರಣೆ

ಹರಪನಹಳ್ಳಿ, ಜು.5- ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಸೋಮವಾರ ತಾಲ್ಲೂಕು ಆಡಳಿತ ವತಿಯಿಂದ ಹಡಪದ ಅಪ್ಪಣ್ಣ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಹಡಪದ ಸಮಾಜದ ವಿದ್ಯಾರ್ಥಿಗಳಿಗೆ ತಾಲ್ಲೂಕು ಆಡಳಿತದಿಂದ ಸನ್ಮಾನಿಸಿ, ಗೌರವಿಸಲಾಯಿತು.

ಉಪವಿಭಾಗಾಧಿಕಾರಿ ಟಿ.ವಿ.ಪ್ರಕಾಶ್, ತಹಶೀಲ್ದಾರ್ ಡಾ.ಶಿವಕುಮಾರ ಬಿರಾದಾರ್, ಹೆಚ್.ನಾಗರಾಜ್, ಹೆಚ್.ದ್ವಾರಕೇಶ್, ವಸಂತಪ್ಪ ಸೇರಿದಂತೆ ಸಿಬ್ಬಂದಿ ಇದ್ದರು.

error: Content is protected !!