ದಾವಣಗೆರೆ, ಜು.6- ಗ್ರಾಮೀಣ ಪ್ರತಿಭಾನಿತ್ವ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಡಾ. ತಿಮ್ಮಾರೆಡ್ಡಿ ನೀಟ್ ಅಕಾಡೆಮಿಯನ್ನು ಪ್ರಾರಂಭ ಮಾಡಲಾಗುವುದು ಎಂದು ಅಂಜನಾದ್ರಿ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಡಾ. ಎ. ತಿಮ್ಮಾರೆಡ್ಡಿ ಹಾಗೂ ಕಾರ್ಯಕ್ರಮ ಸಂಯೋಜಕ ಡಾ. ಮಹಾಂತೇಶ್ ಆರ್. ಕಮ್ಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಇದೇ ದಿನಾಂಕ 13 ರಂದು ತರಗತಿಗಳನ್ನು ಆರಂಭಿಸಲಾಗುವುದು. ವೈದ್ಯಕೀಯ ಶಿಕ್ಷಣಕ್ಕೆ ನೀಟ್ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆಯಬೇಕಿದ್ದು, ಇದಕ್ಕೆ ಅಗತ್ಯ ಇರುವ ಕೋಚಿಂಗ್ ನೀಡಲಾಗುವುದು ಎಂದರು. ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮ ನಿರ್ದೇಶಕ ದಿಲೀಪ್ ಕುಮಾರ್, ದಿವ್ಯಾ ದಿಲೀಪ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.