ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದಾವಣಗೆರೆ ದಕ್ಷಿಣ ವಲಯ ಹಾಗೂ ಸಾಕ್ಷರತಾ ಮತ್ತು ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಇಂದು ಮಧ್ಯಾಹ್ನ 3.30 ಕ್ಕೆ ಸೀತಮ್ಮ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಹಾಗೂ ಪ್ರೌಢಶಾಲಾ ವಿಭಾಗದ ಸ್ಪರ್ಧಾ ವಿಜೇತರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಎ.ಜೆ. ರವಿಕುಮಾರ್ ಅಧ್ಯ ಕ್ಷತೆ ವಹಿಸುವರು. ಕ್ಷೇತ್ರ ಶಿಕ್ಷಣಾ ಧಿಕಾರಿ ಬಿ.ಎಂ. ದಾರುಕೇಶ್, ಡಿವೈಎಸ್ಪಿ ಬಿ.ಎಸ್. ಬಸವರಾಜ್, ಉದ್ಯಮಿ ದೇವರಮನಿ ಶಿವ ಕುಮಾರ್, ಉಪ ಪ್ರಾಚಾರ್ಯ ಎ.ಆರ್. ಮಂಜಪ್ಪ, ಉಪನ್ಯಾಸಕ ಡಾ. ನವೀನ್ ಗಂಗಾಧರ್ ಕೂಡ್ಲಿಗಿ, ಕರಾಮಸಾ ಪರಿಷತ್ ಕಾರ್ಯದರ್ಶಿ ಡಾ. ಧನಂಜಯ ಮೂರ್ತಿ ಭಾಗವಹಿಸಲಿದ್ದಾರೆ.
July 23, 2024