ಬಸಾಪುರದಲ್ಲಿ ಇಂದು ನಿಜಸುಖಿ ಹಡಪದ ಅಪ್ಪಣ್ಣ ಜಯಂತಿ

ಬಸಾಪುರದಲ್ಲಿ ಇಂದು ನಿಜಸುಖಿ ಹಡಪದ ಅಪ್ಪಣ್ಣ ಜಯಂತಿ

 ಶರಣ ಸಾಹಿತ್ಯ ಪರಿಷತ್ ದಾವಣಗೆರೆ ನಗರ ಘಟಕ ಹಾಗೂ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಇವರ ಸಹಯೋಗಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ಬಸಾಪುರದ ಆರಾಧ್ಯ ಬಡಾವಣೆಯ ಶ್ರೀ ರೇವಣಸಿದ್ಧೇಶ್ವರ ಪ್ರೌಢಶಾಲೆಯ ಶ್ರೀಮತಿ ನಾಗಮ್ಮ ಸಭಾಂಗಣದಲ್ಲಿ ದತ್ತಿ ಕಾರ್ಯಕ್ರಮ ಮತ್ತು ನಿಜಸುಖಿ ಹಡಪದ ಅಪ್ಪಣ್ಣ ಜಯಂತಿ ನಡೆಯಲಿದೆ.

ಮೆಳ್ಳೇಕಟ್ಟೆ ಶ್ರೀ ರೇವಣಸಿದ್ಧೇಶ್ವರ ವಿದ್ಯಾಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಂ.ಎಸ್. ನಾಗರಾಜಪ್ಪ ಕಾರ್ಯಕ್ರಮವನ್ನು ಉದ್ಘಾಟಿಸುವರು. ಶರಣ ಸಾಹಿತ್ಯ ಪರಿಷತ್ ದಾವಣಗೆರೆ ನಗರ ಘಟಕದ ಅಧ್ಯಕ್ಷ ಪರಮೇಶ್ವರಪ್ಪ ಎಂ. ಸಿರಿಗೆರೆ ಅಧ್ಯಕ್ಷತೆ ವಹಿಸಲಿದ್ದಾರೆ.

ಆಹಾರ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ಬಿ.ಟಿ. ಪ್ರಕಾಶ್ `ನಿಜಸುಖಿ ಹಡಪದ ಅಪ್ಪಣ್ಣ ಮತ್ತು ವಚನ ಸಾಹಿತ್ಯ’ ಕುರಿತು ಮಾತನಾಡಲಿದ್ದಾರೆ. ಇದೇ ವೇಳೆ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್. ಅರುಣ್ ಕುಮಾರ್ ಅವರನ್ನು ಸನ್ಮಾನಿಸಲಾಗುವುದು.

ಮುಖ್ಯ ಅತಿಥಿಗಳಾಗಿ ಹಿರಿಯ ಪತ್ರಕರ್ತ ಬಾ.ಮ. ಬಸವರಾಜಯ್ಯ, ಶ್ರೀ ಹಡಪದ ಅಪ್ಪಣ್ಣ ಸಮಾಜದ ಜಿಲ್ಲಾಧ್ಯಕ್ಷ ಶಶಿಧರ ಬಸಾಪುರ, ತಾಲ್ಲೂಕು ಕದಳಿ ಮಹಿಳಾ ವೇದಿಕೆ ಅಧ್ಯಕ್ಷೆ ಗಾಯತ್ರಿ ವಸ್ತ್ರದ್, ರೇವಣಸಿದ್ಧೇಶ್ವರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಕೆ.ಜಿ. ಸೌಭಾಗ್ಯಮ್ಮ ಭಾಗವಹಿಸಲಿದ್ದಾರೆ.

error: Content is protected !!