ಮದ್ರಾಸ್ ಐ : ಕಕ್ಕರಗೊಳ್ಳದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಾಗೃತಿ

ಮದ್ರಾಸ್ ಐ : ಕಕ್ಕರಗೊಳ್ಳದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಾಗೃತಿ

ದಾವಣಗೆರೆ, ಜು. 28 – ಹವಾಮಾನ ವ್ಯತ್ಯಾಸದಿಂದ ಮತ್ತು ನಿರಂತರವಾಗಿ ಬರುತ್ತಿರುವ ಕಣ್ಣಿನ ಸಮಸ್ಯೆಗೆ ಕಾರಣಗಳು ಮತ್ತು ಅದಕ್ಕೆ ಇರುವ ಪರಿಹಾರಗಳ ಕುರಿತು ವೈದ್ಯಾಧಿಕಾರಿ ಡಾ. ವೆಂಕಟೇಶ್ ಎಲ್.ಡಿ ತಿಳಿಸಿದರು.

ಗುರುವಾರ ಕಕ್ಕರಗೊಳ್ಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾಮಾನ್ಯವಾಗಿ ಚಳಿಗಾಲದಲ್ಲಿ ಕಾಣಿಸಿಕೊಳ್ಳುವ ಮದ್ರಾಸ್ ಐ ರೋಗದ ಕುರಿತ ಜಾಗೃತಿ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. 

ತೇವಾಂಶ ಹೆಚ್ಚಾದಾಗ ಅಥವಾ ಚಳಿಗಾಲದ ವಾತಾವರಣ ದಲ್ಲಿ ಹುಟ್ಟಿಕೊಳ್ಳುವ ಈ ವೈರಾಣುಗಳು ನೇರವಾಗಿ ಕಣ್ಣಿನ ಮೇಲೆ ಪರಿಣಾಮವುಂಟು ಮಾಡುತ್ತಿದ್ದು ಸಾರ್ವಜನಿಕರು ಎಚ್ಚೆತ್ತು ಕೊಂಡು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂದರು.

ಮದ್ರಾಸ್ ಐ ಮನುಷ್ಯನ ಕಣ್ಣಿನ ಬಿಳಿ ಭಾಗವನ್ನು ಕೆಂಪಾಗಿ ಸುತ್ತದೆ. ಕಣ್ಣುಗಳಲ್ಲಿ ಉರಿ, ನೋವು ಉಂಟಾಗಿ,  ಕಣ್ಣುಗಳಿಂದ ನಿರಂತರವಾಗಿ ನೀರು ಹೊರಬರು ವುದು ಹಾಗೂ ಕಣ್ಣು ಊದಿಕೊಂಡಂತಾಗುತ್ತವೆ.

ವೈರಾಣು ಬಾರದಂತೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳೆಂ ದರೆ, ಹೆಚ್ಚಿನ ಜನ ಇರುವ ಪ್ರದೇಶಗಳಿಗೆ ಹೋಗುವು ದನ್ನು ಕಡಿಮೆ ಮಾಡಬೇಕು. ಪದೇ ಪದೇ ಕಣ್ಣುಗಳನ್ನು ಮುಟ್ಟಿ ಕೊಳ್ಳಬಾರದು ಹಾಗೂ  ಆಗಾಗ ಸೋಪಿನಿಂದ ಕೈ ತೊಳೆಯುವು ದನ್ನು ಅಭ್ಯಾಸ ಮಾಡಬೇಕು. ವೈರಾಣು ತಗುಲಿ ಕಣ್ಣಿನ ಉರಿ ಊತ ಬಂದ ವ್ಯಕ್ತಿ ಜೊತೆ ನಿಕಟ ಸಂಪರ್ಕ ಹೊಂದು ವುದನ್ನು ಹಾಗೂ ಅವರು ಉಪಯೋಗಿಸಿದ ಟವೆಲ್, ತಲೆದಿಂಬನ್ನು ಇತರರು ಉಪಯೋಗಿಸದಂತೆ ನೋಡಿಕೊಳ್ಳಬೇಕು ಎಂದರು. 

error: Content is protected !!