ಬಿಸಿಯೂಟ ತಯಾರಕರಿಂದ ಇಂದು ನಗರದಲ್ಲಿ ಪ್ರತಿಭಟನೆ

ದಾವಣಗೆರೆ ತಾಲ್ಲೂಕು ಅಕ್ಷರ ದಾಸೋಹ ಮಧ್ಯಾಹ್ನ ಬಿಸಿಯೂಟ ಯೋಜನೆಯಡಿಯಲ್ಲಿ ಶಾಲೆಗಳಲ್ಲಿ ಅಡುಗೆ ಕೆಲಸ ಮಾಡುತ್ತಿರುವ ಬಿಸಿಯೂಟ ತಯಾರಕರಿಗೆ ಎರಡು ತಿಂಗಳ ಬಾಕಿ ವೇತನ ಬಿಡುಗಡೆಗೊಳಿಸುವಂತೆ ಒತ್ತಾಯಿಸಿ, ದಾವಣಗೆರೆ ತಾಲ್ಲೂಕು ಪಂಚಾಯಿತಿ ಕಚೇರಿ ಬಳಿ ಬಿಸಿಯೂಟ ತಯಾರಕರು ಪ್ರತಿಭಟನೆ ನಡೆಸಲಿದ್ದಾರೆ ಎಂದು ಬಿಸಿಯೂಟ ತಯಾರಕರ ಫೆಡರೇಷನ್ (ಎಐಟಿಯುಸಿ ಸಂಯೋಜಿತ) ಜಿಲ್ಲಾಧ್ಯಕ್ಷ ಆವರಗೆರೆ ಚಂದ್ರು ತಿಳಿಸಿದ್ದಾರೆ.

ತಾಲ್ಲೂಕು ಪಂಚಾಯಿತಿ ಕಚೇರಿ ಬಳಿ ಇಂದು ಬೆಳಗ್ಗೆ 10.30 ಗಂಟೆಗೆ ಪ್ರತಿಭಟನೆ ನಡೆಸುವರು ಎಂದು ಸಂಘಟನೆಯ ತಾಲ್ಲೂಕು ಅಧ್ಯಕ್ಷೆ ಮಳಲ್ಕೆರೆ ಜಯಮ್ಮ, ಪ್ರಧಾನ ಕಾರ್ಯದರ್ಶಿ ಜ್ಯೋತಿಲಕ್ಷ್ಮಿ, ಖಜಾಂಚಿ ಪದ್ಮಾ, ಪದಾಧಿಕಾರಿಗಳಾದ ನಾಗರತ್ನಮ್ಮ, ರತ್ಮಮ್ಮ,  ರುದ್ರಮ್ಮ, ಮಂಜುಳಾ, ಸರೋಜಾ, ರೇಣುಕಮ್ಮ, ಪ್ರೇಮಕ್ಕ ಮತ್ತಿತರರು ವಿವರಿಸಿದ್ದಾರೆ.

error: Content is protected !!