ಮಲ್ಲಮ್ಮ ನಾಗರಾಜ್‌ ಅವರಿಗೆ `ವಿಶಿಷ್ಟ ಲೇಖಕಿ’ ಪ್ರಶಸ್ತಿ ಪ್ರದಾನ

ಮಲ್ಲಮ್ಮ ನಾಗರಾಜ್‌ ಅವರಿಗೆ  `ವಿಶಿಷ್ಟ ಲೇಖಕಿ’ ಪ್ರಶಸ್ತಿ ಪ್ರದಾನ

ದಾವಣಗೆರೆ, ಆ. 1- ಕರ್ನಾಟಕ ಲೇಖಕಿಯರ ಸಂಘದಿಂದ ನಗರದ ಹಿರಿಯ ಸಾಹಿತಿ ಶ್ರೀಮತಿ ಮಲ್ಲಮ್ಮ ನಾಗರಾಜ್ ಅವರಿಗೆ ವಿಶಿಷ್ಠ ಲೇಖಕಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬೆಂಗಳೂರಿನ ಜೆ.ಸಿ.ರಸ್ತೆಯಲ್ಲಿರುವ ನಯನ ಸಭಾಂಗಣದಲ್ಲಿ ಕರ್ನಾಟಕ ಲೇಖಕಿಯರ ಸಂಘದ 44ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರ ಅವರು ಮಲ್ಲಮ್ಮ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷರಾದ ಶ್ರೀಮತಿ ಡಾ. ಹೆಚ್.ಎಲ್. ಪುಷ್ಪ  ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಮಾಜಿ ಸಚಿವರಾದ ಶ್ರೀಮತಿ ರಾಣಿ ಸತೀಶ್, ಬಿಎಂಶ್ರೀ ಪ್ರತಿಷ್ಠಾನದ ಅಧ್ಯಕ್ಷ ಡಾ. ಬೈರಮಂಗಲ ರಾಮೇಗೌಡ, ಹೆಸರಾಂತ ವಿಮರ್ಶಕರಾದ ಡಾ. ಎಂ.ಎಸ್. ಆಶಾದೇವಿ ಮತ್ತು ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

error: Content is protected !!