ಅನುತ್ತೀರ್ಣವಾದ ಪಿಯು ವಿದ್ಯಾರ್ಥಿಗಳಿಗೆ ಅವಕಾಶ

ದಾವಣಗೆರೆ, ಆ.2-   ದ್ವಿತೀಯ ಪಿಯುಸಿ ಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿ ಗಳಿಗೆ   ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ 2ನೇ ಬಾರಿಗೆ ವಿಶೇಷ ಪೂರಕ ಪರೀಕ್ಷೆಯನ್ನು ನಡೆಸಲಾಗು ತ್ತಿದೆ. ಆಗಸ್ಟ್ 21 ರಿಂದ ಸೆಪ್ಟಂ ಬರ್ 2ರವರೆಗೆ ಪರೀಕ್ಷೆಗಳು ಜರುಗಲಿದ್ದು,   ಆಗಸ್ಟ್ 10 ರೊಳ ಗಾಗಿ ಕಾಲೇಜು ಲಾಗಿನ್ ಮೂಲಕ ಪರೀಕ್ಷಾ ಶುಲ್ಕ ಪಾವತಿಸುವ ಮೂಲಕ ನೊಂದಣಿ ಮಾಡಿ ಕೊಳ್ಳಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

error: Content is protected !!