ನಗರದಲ್ಲಿ ನಾಳೆ ಪದ್ಮಶಾಲಿ ಸಮಾಜದಿಂದ ಪ್ರತಿಭಾ ಪುರಸ್ಕಾರ

ದಾವಣಗೆರೆ, ಆ.4- ಶ್ರೀ ಮಾರ್ಕಂಡೇಶ್ವರ ಪದ್ಮಶಾಲಿ (ನೇಕಾರ) ಯುವಕರ ಸಂಘದ ವತಿಯಿಂದ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಎಸ್.ಕೆ.ಪಿ. ರಸ್ತೆಯಲ್ಲಿರುವ ಶ್ರೀ ಮಾರ್ಕಂಡೇಶ್ವರ ಸಮುದಾಯ  ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಸೇಪೂರ್ ಆನಂದ್ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಡಿದ್ದು ದಿನಾಂಕ 6ರ ಭಾನುವಾರ ಸಂಜೆ 4 ಗಂಟೆಗೆ ಸಮಾರಂಭವನ್ನು ಪದ್ಮಶಾಲಿ ಸಮಾಜದ ಶ್ರೀ ಪ್ರಭುಲಿಂಗ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ದಕ್ಷಿಣ ಕನ್ನಡ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ (ಮಂಗಳೂರು) ಸದಸ್ಯ ಪಿ.ವಿ. ಲಿಂಗರಾಜ್ ಉದ್ಘಾಟಿಸಲಿದ್ದಾರೆ.

ಪಿ.ಜಿ. ಶ್ರೀನಿವಾಸ್ ಅಧ್ಯಕ್ಷತೆ ವಹಿಸಲಿದ್ದು, ಪಿ.ಜೆ. ನಾಗರಾಜ್, ವೆಂಕಟೇಶ್ ಎಲ್.ಲಿಂಗಪಲ್ಲಿ, ರೇಣುಕರಾಜ್ ಜಿ.ಹೆಚ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.  

ಪದ್ಮಶಾಲಿ ಸಮಾಜದ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ, 5 ರಿಂದ 14 ವರ್ಷದ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಅಂದು ಬೆಳಿಗ್ಗೆ 10 ರಿಂದ 12ರವರೆಗೆ ನಡೆಸಲಾಗುವುದು. ಮಧ್ಯಾಹ್ನ 3 ರಿಂದ 4 ಗಂಟೆೆವರೆಗೆ  ವಿದ್ಯಾರ್ಥಿಗಳಿಗೆ ಮೋಟಿವೇಷನ್ ಕ್ಲಾಸ್ ನಡೆಸಲಾಗುವುದು ಎಂದು ಹೇಳಿದರು.

error: Content is protected !!