ದಾವಣಗೆರೆ, ಆ.11- ನಾಳೆ ದಿನಾಂಕ 12 ಮತ್ತು 13 ರಂದು ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ವಕೀಲರ ಸಮ್ಮೇಳನದಲ್ಲಿ ಭಾಗವಹಿಸಲು ದಾವಣಗೆರೆ ಜಿಲ್ಲಾ ವಕೀಲರ ಸಂಘದಿಂದ ಸುಮಾರು 350 ಜನ ವಕೀಲರು ಸೇರಿದಂತೆ ಜಿಲ್ಲೆಯ 600ಕ್ಕೂ ಹೆಚ್ಚು ವಕೀಲರು ಇಂದು ಮೈಸೂರಿಗೆ ತೆರಳಿದರು.
ದಾವಣಗೆರೆ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್. ಅರುಣಕುಮಾರ್, ಕಾರ್ಯದರ್ಶಿ ಎಸ್. ಬಸವರಾಜ್, ಉಪಾಧ್ಯಕ್ಷ ಜಿ.ಕೆ. ಬಸವರಾಜ್ ಗೋಪನಾಳು, ಸಹ ಕಾರ್ಯದರ್ಶಿ ಎ.ಎಸ್. ಮಂಜುನಾಥ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ವಕೀಲರು ಇದ್ದರು.