ನಗರದಲ್ಲಿ ಇಂದು ‘ವಿಚಾರ ಸಂಗಮ’

ಜಿಲ್ಲಾ ವೀರಶೈವ ಲಿಂಗಾಯತ ಪಂಚಮಸಾಲಿ ನೌಕರರ ಜಿಲ್ಲಾ ಮತ್ತು ನಗರ ಘಟಕದ ವತಿಯಿಂದ ಇಂದು ಸಂಜೆ 6.30 ಗಂಟೆಗೆ ಪಂಚಮಸಾಲಿ ಸಮಾಜದ ಕಚೇರಿಯಲ್ಲಿ ಶ್ರೀಮತಿ ಕವಿತಾ ಹೆಚ್.ಬಿ. ತರಬೇತಿದಾರರು, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ   ಇವರಿಂದ ವಿಚಾರ ಸಂಗಮ ಕಾರ್ಯಕ್ರಮ ಏರ್ಪಡಿಸಲಾಗಿದೆ. 

ಕಾರ್ಯಕ್ರಮವನ್ನು ಪಂಚಮಸಾಲಿ ಸಮಾಜದ ಜಿಲ್ಲಾ ಅಧ್ಯಕ್ಷ ಬಿ.ಸಿ. ಉಮಾಪತಿ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಜಿಲ್ಲಾ ನೌಕರರ ಘಟಕದ ಅಧ್ಯಕ್ಷ ಶ್ರೀಧರ್‌ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಪಾಧ್ಯಕ್ಷ ವಾಣಿ ಶಿವಣ್ಣ, ಎಂ. ದೊಡ್ಡಪ್ಪ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಸಿ.ಕಾಶಿನಾಥ್‌, ನಗರ ನೌಕರರ ಘಟಕದ ಅಧ್ಯಕ್ಷ ಕೆ.ಎಸ್. ಸುರೇಶ್‌, ತಾಲ್ಲೂಕು ಘಟಕದ ಅಧ್ಯಕ್ಷ ಎಸ್. ಮಲ್ಲಿನಾಥ್‌ ಭಾಗವಹಿಸುವರು.

error: Content is protected !!