ನಗರದಲ್ಲಿ ಇಂದು ರಂಭಾಪುರಿ ಶ್ರೀಗಳಿಂದ ಪೂಜೆ, ಜನ ಜಾಗೃತಿ ಧರ್ಮ ಸಮಾವೇಶ

ಜಿ.ಎಸ್. ಅನಿತ್‌ ಕುಮಾರ್ ಅವರಿಗೆ  `ಶಿಕ್ಷಣ ಸೇವಾ ಧುರೀಣ’  ಬಿರುದು ಪ್ರದಾನ

ಶ್ರೀ ಅಭಿನವ ರೇಣುಕ ಮಂದಿರದಲ್ಲಿ ನಡೆಯುತ್ತಿರುವ ರಂಭಾಪುರಿ ಪೀಠದ ಶ್ರೀಮದ್ ರಂಭಾಪುರಿ ಜಗದ್ಗುರುಗಳವರ 25ನೇ ವರ್ಷದ ಆಷಾಢ ಮಾಸದ ಇಷ್ಟಲಿಂಗ ಮಹಾಪೂಜೆ ಹಾಗೂ ಧರ್ಮೋತ್ತೇಜಕ ಕಾರ್ಯಕ್ರಮದಲ್ಲಿ ಇಂದಿನ ಸಮಾರಂಭದ ವಿವರ.

ಇಂದು ಸಂಜೆ 6.30ಕ್ಕೆ ಏರ್ಪಾಡಾಗಿರುವ ಧರ್ಮೋತ್ತೇಜಕ ಸಮಾರಂಭದ ನೇತೃತ್ವವನ್ನು ಶ್ರೀ ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮಿ ಗಳು (ಅರಳೆಲೆ ಹಿರೇಮಠ – ಬಂಕಾಪುರ) ವಹಿಸುವರು. ಡಾ. ಶ್ರೀ ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ (ಗವಿಮಠ-ಕಣ್ವಕುಪ್ಪಿ) ಉಪದೇಶಾಮೃತ ನೀಡುವರು. 

ಇದೇ ಸಂದರ್ಭದಲ್ಲಿ ಶ್ರೀಶೈಲ ಎಜುಕೇಷನ್ ಟ್ರಸ್ಟ್‌ನ ನಿರ್ದೇಶಕ ಜಿ.ಎಸ್. ಅನಿತ್‌ ಕುಮಾರ್  ಅವರಿಗೆ `ಶಿಕ್ಷಣ ಸೇವಾ ಧುರೀಣ’ ಬಿರುದಿನೊಂದಿಗೆ  ಗೌರವ ಶ್ರೀರಕ್ಷೆ, ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಜಿಲ್ಲಾ ಶ್ರೀ ಮದ್ವೀರಶೈವ ಸದ್ಬೋಧನಾ ಸಂಸ್ಥೆ ಅಧ್ಯಕ್ಷ ದೇವರಮನೆ ಶಿವಕುಮಾರ್, ಶ್ರೀ ಜಗದ್ಗುರು ರೇಣುಕ ಸಾಂಸ್ಕೃತಿಕ ಸಂಘದ ಅಧ್ಯಕ್ಷ ದೇವರಮನೆ ಶಿವರಾಜ್ ತಿಳಿಸಿದ್ದಾರೆ. 

ಕೈಗಾರಿಕೋದ್ಯಮಿ ಎಸ್.ಎಸ್. ಗಣೇಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ ವೀರೇಶ್ ಹನಗವಾಡಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ. ಮಂಜಪ್ಪ, ಜಿಲ್ಲಾ ಜೆಡಿಎಸ್ ಅಧ್ಯಕ್ಷ  ಬಿ. ಚಿದಾನಂದಪ್ಪ, ಕಾಂಗ್ರೆಸ್ ಮುಖಂಡ ಎಂ.ಟಿ. ಸುಭಾಷ್‌ಚಂದ್ರ, ಅ.ಭಾ.ವೀ. ಮಹಾಸಭಾ ದಾವಣಗೆರೆ  ಘಟಕದ ಅಧ್ಯಕ್ಷ ಜಿ. ಶಿವಯೋಗಪ್ಪ ಅವರುಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

error: Content is protected !!