ರಾಣೇಬೆನ್ನೂರು, ಆ.28- ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಬೆಂಗಳೂರಿನ ನಯನ ಸಭಾಂಗಣ ಕನ್ನಡ ಭವನ ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿ ನಡೆದ ಸಾಮಾಜಿಕ ದೃಷ್ಟಿಯಲ್ಲಿ ಸ್ವಾತಂತ್ರ್ಯ ಕುರಿತು ವಿಚಾರ ಸಂಕಿರಣ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ರಾಣೇಬೆನ್ನೂರಿನ ಹೆಚ್.ಜಿ ಡಿ.ಎಸ್.ಎಸ್ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಮಾರುತಿ ನಗರ ಶಾಲೆಯ ಮುಖ್ಯೋಪಾಧ್ಯಾಯ ಡಾ. ಮಾರುತಿ ಲಮಾಣಿ ಅವರಿಗೆ ಕರ್ನಾಟಕ ಶಿಕ್ಷಣ ಸೇವಾ ರತ್ನ ಪ್ರಶಸ್ತಿ ನೀಡಲಾಯಿತು.
ಪ್ರಶಸ್ತಿ ಪಡೆದ ಮಾರುತಿ ಲಮಾಣಿ ಅವರನ್ನು ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಪ್ರತಿನಿಧಿಗಳಾದ ಮಲ್ಲಿಕಾರ್ಜುನ ಬಾವಿಕಟ್ಟಿ, ನಾಗರಾಜ ನಲವಾಗಲ, ತಾಲ್ಲೂಕು ಅಧ್ಯಕ್ಷ ಎಸ್.ಹೆಚ್. ಪಾಟೀಲ್, ಕಾರ್ಯದರ್ಶಿ ಬಸವರಾಜ್ ನಾಯಕ್, ಉಪಾಧ್ಯಕ್ಷರಾದ ಪೋಲಿಸ್ ಗೌಡ, ಆರ್.ವಿ. ಮಠದ್, ಸಂಘಟನಾ ಕಾರ್ಯದರ್ಶಿ ಬಸವರಾಜ ಶಾಮನೂರು, ಹಾಲೇಶ್ ಅಭಿನಂದಿಸಿದ್ದಾರೆ.