ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ನಾಳೆ ನೂಲು ಹುಣ್ಣಿಮೆ ವಿಶೇಷ ಪೂಜೆ

ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ  ನಾಳೆ ನೂಲು ಹುಣ್ಣಿಮೆ ವಿಶೇಷ ಪೂಜೆ

ದಾವಣಗೆರೆ, ಆ. 29- ನಗರದ ದೇವರಾಜ ಅರಸು ಬಡಾವಣೆ ‘ಎ’ ಬ್ಲಾಕ್‌ನಲ್ಲಿರುವ ಶ್ರೀ ಮಾತಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ನಾಡಿದ್ದು ದಿನಾಂಕ 31ರ ಗುರುವಾರ ನೂಲು ಹುಣ್ಣಿಮೆ ಪ್ರಯುಕ್ತ ಶ್ರೀ ಸತ್ಯ ನಾರಾಯಣ ಸ್ವಾಮಿ ‌ಪೂಜಾ ಕಥಾ, ಪ್ರಧಾನ ದೇವತೆ ಶ್ರೀ ಮಾತಾ ಅನ್ನಪೂರ್ಣೇಶ್ವರಿಗೆ ಮಹಾ ಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ ಎಂದು ದೇವಸ್ಥಾನ ಸಮಿತಿ ಗೌರವ ಅಧ್ಯಕ್ಷ ಆರ್.ಜಿ. ನಾಗೇಂದ್ರ ಪ್ರಕಾಶ್ ತಿಳಿಸಿದ್ದಾರೆ. ಶ್ರೀಮತಿ ಆದಿಲಕ್ಷ್ಮಮ್ಮ ದಿ. ಶ್ರೀ ವಿ. ಸತ್ಯನಾರಾಯಣರಾವ್ ಹಾಗೂ ಸಹ ಕುಟುಂಬದವರು  ಸೇವಾಕರ್ತರಾಗಿದ್ದಾರೆ ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ಪ್ರಕಾಶ್ ಪಾಟೀಲ್ ವಿವರಿಸಿದ್ದಾರೆ.

error: Content is protected !!