ಬೆಳ್ಳೂಡಿ: ನಾಳೆ ಶ್ರೀ ಆಂಜನೇಯ ಸ್ವಾಮಿಗೆ ಪುನಃ ಪ್ರಾಣ ಪ್ರತಿಷ್ಠಾಪನೆ

ಬೆಳ್ಳೂಡಿ ಗ್ರಾಮದ ಶ್ರೀ ಆಂಜನೇಯ ಸ್ವಾಮಿಗೆ ನಾಳೆ ಶನಿವಾರ ಬ್ರಾಹ್ಮೀ ಮುಹೂರ್ತದಲ್ಲಿ ವಿವಿಧ ಪೂಜೆ, ಅಭಿಷೇಕಗಳೊಂದಿಗೆ ಪುನಃ ಪ್ರಾಣ ಪ್ರತಿಷ್ಠಾಪನೆಯನ್ನು ರಟ್ಟಿಹಳ್ಳಿ ಕಬ್ಬಿಣ ಕಂಥಿ ಮಠದ ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಅವರ ನೇತೃತ್ವದಲ್ಲಿ ನೆರವೇರಿಸಲಾಗುವುದು.

ನಂತರ ಧಾರ್ಮಿಕ ಸಭೆಯನ್ನು ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮದ ಅಂಗವಾಗಿ ಇಂದು ಸಂಜೆ ಗೋಧೂಳಿ ಮುಹೂರ್ತದಲ್ಲಿ ವಿಘ್ನೇಶ್ವರ ಹಾಗೂ ಗಂಗಾಪೂಜೆ ನಡೆಯಲಿದೆ. 

error: Content is protected !!