ದಾವಣಗೆರೆ, ಆ.31- ಒಂದು ಜಿಲ್ಲೆ ಒಂದು ಕ್ರೀಡೆ ಯೋಜನೆಯಡಿ ದಾವಣಗೆರೆ ಜಿಲ್ಲೆಯಲ್ಲಿ ಗ್ರಾಮೀಣ ಕ್ರೀಡೆ ಕಬಡ್ಡಿಗೆ ಆದ್ಯತೆ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದರು.
ಗುರುವಾರ ಜಿಲ್ಲಾಧಿಕಾರಿ ಗಳ ಕಛೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳೊಂದಿಗೆ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತಾನಾಡಿದರು.
`ಒಂದು ಜಿಲ್ಲೆ, ಒಂದು ಕ್ರೀಡೆ’ ಪ್ರಾರಂಭಿಸಲು ಉದ್ದೇಶಿಸಲಾಗಿದೆ. ಈ ಕ್ರೀಡೆಗೆ ಎಲ್ಲಾ ರೀತಿಯ ಪೂರಕ ವಾತಾವರಣ ನಿರ್ಮಿಸುವ ಮೂಲಕ ಕ್ರೀಡೆಗೆ ಪ್ರೋತ್ಸಾಹ ನೀಡಲು ಉದ್ದೇಶಿಸಲಾಗಿದೆ. ಕಬಡ್ಡಿಯನ್ನು ಪ್ರೋತ್ಸಾಹಿಸಲು ಅಗತ್ಯವಿರುವ ಆಟದ ಮೈದಾನ, ಮೂಲಭೂತ ಸೌಕರ್ಯ ಮತ್ತು ಕೋಚ್ ಗಳನ್ನು ನೇಮಕ ಮಾಡಲಾಗುತ್ತದೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಉಪಕಾರ್ಯದರ್ಶಿ ಕೃಷ್ಣ ನಾಯ್ಕ್, ಜಿಲ್ಲಾ ಕ್ರೀಡಾ ಅಧಿಕಾರಿ ಹರ್ಷ ಉಪಸ್ಥಿತರಿದ್ದರು.