ರಾಜ್ಯ ಮಟ್ಟದ ಹ್ಯಾಂಡ್‌ಬಾಲ್ ಪಂದ್ಯಾವಳಿ

ದಾವಣಗೆರೆ, ಆ.31- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಉಪನಿರ್ದೇಶಕರ ಕಚೇರಿ (ಆಡಳಿತ) ಶಾಲಾ ಶಿಕ್ಷಣ ಮಂಡಳಿ ಇವರ ಸಂಯುಕ್ತಾಶ್ರಯದಲ್ಲಿ 2023-24ನೇ ಸಾಲಿನ 14-17 ವರ್ಷದ ವಯೋಮಿತಿಯೊಳಗಿನ ಬೆಂಗಳೂರು ವಿಭಾಗ ಮಟ್ಟದ ಮತ್ತು ರಾಜ್ಯ ಮಟ್ಟದ ಹ್ಯಾಂಡ್‌ಬಾಲ್ ಪಂದ್ಯಾವಳಿಗಳ ಉದ್ಘಾಟನಾ ಸಮಾರಂಭವು ನಾಡಿದ್ದು ಸೆಪ್ಟೆಂಬರ್ 3ರಂದು ಬೆಳಿಗ್ಗೆ 10.30ಕ್ಕೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಜಿಲ್ಲಾ ಮಂತ್ರಿ ಎಸ್.ಎಸ್. ಮಲ್ಲಿಕಾರ್ಜುನ್ ಉದ್ಘಾಟಿಸಿ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯಅತಿಥಿಗಳಾಗಿ ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕ ಶಾಮನೂರು ಶಿವಶಂಕರಪ್ಪ, ವಿಧಾನ ಪರಿಷತ್‌ ಸದಸ್ಯರಾದ ಕೆ.ಪಿ. ನಂಜುಂಡಿ ವಿಶ್ವಕರ್ಮ, ಎನ್. ರವಿಕುಮಾರ್, ಡಾ. ತೇಜಸ್ವಿನಿ ಗೌಡ, ಎಸ್.ಎಲ್. ಭೋಜೇಗೌಡ, ಕೆ. ಅಬ್ಧುಲ್ ಜಬ್ಬಾರ್ ಮತ್ತು ಜಿಲ್ಲೆಯ ಎಲ್ಲಾ ಶಾಸಕರು ಭಾಗವಹಿಸಲಿದ್ದಾರೆ.

error: Content is protected !!