ಮಾ.ಸ.ಬ. ಕಾಲೇಜಿನ ಪುನಶ್ಚೇತನ ಕಾರ್ಯಕ್ರಮದಲ್ಲಿ ಎಸ್.ಟಿ. ಕುಸುಮ ಶ್ರೇಷ್ಠಿ
ದಾವಣಗೆರೆ, ಸೆ.7- ನಗರದ ಮಾ.ಸ.ಬ. ಕಲಾ ಮತ್ತು ವಾಣಿಜ್ಯ ಕಾಲೇಜಿನ ಬಿ.ಕಾಂ ವಿದ್ಯಾರ್ಥಿಗಳಿಗೆ ಪುನಶ್ಚೇತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಜಿ.ಸಿ. ನೀಲಾಂಬಿಕ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ವಾಣಿಜ್ಯೋದ್ಯಮಿ ಎಸ್. ಟಿ. ಕುಸುಮ ಶ್ರೇಷ್ಟಿ ಮಾತನಾಡಿ, ವ್ಯಾಪಾರದ ಲಾಭದ ಜೊತೆಗೆ ಸಮಾಜ ಸೇವೆ ಮುಖ್ಯ ಎಂದು ಹೇಳುತ್ತಾ, ಭಾರತದ ಆರ್ಥಿಕತೆಯು ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು, ದೇಶದ ಪ್ರಗತಿಯು ಆರ್ಥಿಕ ಅಭಿವೃದ್ಧಿಯನ್ನು ಅವಲಂಬಿಸಿದೆ ಎಂದು ತಿಳಿಸಿದರು.
ವಾಣಿಜ್ಯ ಕ್ಷೇತ್ರದಲ್ಲಿ ಹಲವಾರು ಅವಕಾಶಗಳು ನಿಮಗೆ ಇರುವುದರಿಂದ ಅವುಗಳನ್ನು ಸದುಪಯೋಗ ಪಡಿಸಿಕೊಂಡು ಜೀವನವನ್ನು ರೂಪಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಅವರು ಕಿವಿಮಾತು ಹೇಳಿದರು.
ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ವಿಜಯಕುಮಾರ್ ಎ. ಬಿ. ಸ್ವಾಗತಿಸಿದರು, ವಿದ್ಯಾರ್ಥಿಗಳಾದ ಅನುಷಾ ಮತ್ತು ಲತಾ ಪ್ರಾರ್ಥಿಸಿದರು. ರೋಷನ್ ಇಮಾಮ್ ನಿರೂಪಿಸಿದರು. ಉಪನ್ಯಾಸಕರಾದ ಎಚ್. ಎಂ. ಪ್ರಮೀಳಾ ವಂದಿಸಿದರು.