ಮಲೇಬೆನ್ನೂರು, ಸೆ.9- ಬೆಂಗಳೂರಿನ ಶಿಕ್ಷಕರ ಸದನದಲ್ಲಿ ಶನಿವಾರ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಹಾಗೂ ಶಿಕ್ಷಕರ ರಾಜ್ಯ ಸಮಾವೇಶದಲ್ಲಿ ಮಲೇಬೆನ್ನೂರಿನ ಎಸ್ಬಿಕೆಎಂ ಶಾಲೆಯ ಮುಖ್ಯ ಶಿಕ್ಷಕ ದಂಡಿ ತಿಪ್ಪೇಸ್ವಾಮಿ ಅವರಿಗೆ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಆದಿಚುಂಚನಗಿರಿ ಮಠದ ಡಾ. ನಿರ್ಮಲಾನಂದನಾಥ ಸ್ವಾಮೀಜಿ, ಸಚಿವರಾದ ರಾಮಲಿಂಗರೆಡ್ಡಿ, ದಿನೇಶ್ ಗುಂಡೂರಾವ್, ಸಂಘದ ಗೌರವಾಧ್ಯಕ್ಷ ಡಾ. ಕೆ.ಹನುಮಂತಪ್ಪ ಮತ್ತು ರಾಜ್ಯ ಹಾಗೂ ಜಿಲ್ಲಾಮಟ್ಟದ ಪದಾಧಿಕಾರಿಗಳು ಭಾಗವಹಿಸಿ, ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ದಂಡಿ ತಿಪ್ಪೇಸ್ವಾಮಿಗೆ ಪ್ರಶಸ್ತಿ ಪ್ರದಾನ
![13 dandi thippeswamy 10.09.2023 ದಂಡಿ ತಿಪ್ಪೇಸ್ವಾಮಿಗೆ ಪ್ರಶಸ್ತಿ ಪ್ರದಾನ](https://janathavani.com/wp-content/uploads/2023/09/13-dandi-thippeswamy-10.09.2023.jpg)