ದಾವಣಗೆರೆ, ಸೆ. 11- ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಬಿಜೆಪಿಗೆ ಕಪ್ಪು ಚುಕ್ಕೆ ಇದ್ದಂತೆ. ಪಕ್ಷದ ಮುಖಂಡರ ಬಗ್ಗೆ ತೇಜೋವಧೆ ಮುಂದುವರೆಸಿದರೆ, ಪಕ್ಷದ ಶಿಸ್ತುಪಾಲನಾ ಸಮಿತಿಗೆ ವರದಿ ನೀಡುವುದಾಗಿ ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಇತ್ತೀಚಿನ ಬೆಳವಣಿಗೆ ಕುರಿತು ಮಾಹಿತಿ ನೀಡಲಾಗುವುದು. ಪಕ್ಷದಲ್ಲಿ ಯಾರ ಬಗ್ಗೆ ಆಗಲೀ ಶಿಸ್ತು ಕ್ರಮ ಕೈಗೊಳ್ಳುವುದು. ಪಕ್ಷದಿಂದ ಉಚ್ಛಾಟನೆ ಮಾಡಲು ರಾಜ್ಯ ಬಿಜೆಪಿ ಕ್ರಮ ಕೈಗೊಳ್ಳುತ್ತದೆ ಎಂದರು.
ಉಚ್ಛಾಟನೆ ಕ್ರಮ ಸಮರ್ಥಿಸಿದ ವೀರೇಶ್
ಮಾಜಿ ಶಾಸಕ ಟಿ.ಗುರುಸಿದ್ಧನಗೌಡ ಹಾಗೂ ಅವರ ಪುತ್ರ ಡಾ. ರವಿಕುಮಾರ್ ಉಚ್ಛಾಟನೆ ಬಗ್ಗೆ ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ಸಮರ್ಥನೆ ಮಾಡಿ ಕೊಂಡಿದ್ದು, ಪಕ್ಷದ ತೀರ್ಮಾನದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಗುರುಸಿದ್ಧನಗೌಡರ ಬಗ್ಗೆ ಯಾವುದೇ ದ್ವೇಷ ಇಲ್ಲ. ಉಚ್ಛಾಟನೆ ವಿಚಾರಕ್ಕೂ ಸಂಸದ ಜಿ.ಎಂ. ಸಿದ್ದೇಶ್ವರ ಅವರಿಗೂ ಯಾವುದೇ ಸಂ ಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗುರುಸಿದ್ಧನಗೌಡರು ನೇರವಾಗಿ ವಿಪಕ್ಷಗಳ ಜೊತೆಗೆ ಪ್ರಚಾರ ನಡೆಸಿದ್ದಾರೆಂಬುದರ ಬಗ್ಗೆ ಲಿಖಿತ ರೂಪದಲ್ಲಿ ಮತ್ತು ದಾಖಲೆ ಸಮೇತ ದೂರು ಸಲ್ಲಿಸಲಾಗಿತ್ತು. ಪಕ್ಷದ ತೀರ್ಮಾನದಂತೆ ಉಚ್ಛಾಟನೆ ಮಾಡಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಶ್ರೀನಿವಾಸ ದಾಸಕರಿಯಪ್ಪ, ಮಂಜಾನಾಯ್ಕ, ಪ್ರಧಾನ ಕಾರ್ಯದರ್ಶಿ ಬಿ.ಎಸ್. ಜಗದೀಶ್, ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್, ಮುಖಂಡರಾದ ಶಾಂತರಾಜ್ ಪಾಟೀಲ್, ಮಹೇಶ್ ಪಲ್ಲಾಗಟ್ಟಿ, ಸೋಗಿ ಶಾಂತಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ರೇಣುಕಾಚಾರ್ಯರ ದ್ವಂದ್ವ ಹೇಳಿಕೆಗಳಿಂದ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಿದೆ. ಪಕ್ಷ ವಿರೋಧಿ ಹೇಳಿಕೆಗಳ ಬಗ್ಗೆ ಕಾರ್ಯ ಕರ್ತರು ಗೊಂದಲಕ್ಕೀಡಾ ಗುವುದು ಬೇಡ ಎಂದು ಹೇಳಿದರು. ರೇಣುಕಾಚಾರ್ಯರ ಹೇಳಿಕೆಗಳ ನ್ನು ಯಾರೂ ಕೂಡ ಗಂಭಿರವಾಗಿ ಪರಿಗಣಿಸದಿರಿ. ಕಾರ್ಯಕರ್ತರು ಬೂತ್, ತಾಲ್ಲೂಕು ಮಟ್ಟದಲ್ಲಿ ಪಕ್ಷ ಸಂಘಟನೆ ಕಡೆ ಗಮಹರಿಸು ವಂತೆ ಮನವಿ ಮಾಡಿದರು. ನೋಟೀ ಸ್ಗೆ ಉತ್ತರ ಕೊಡುವು ದಿಲ್ಲ ಎಂದು ರೇಣುಕಾಚಾರ್ಯ ಹೇಳಿರು ವುದು ಸಲ್ಲದು. ಬಿಜೆಪಿಯಲ್ಲಿ ಯಾರೂ ಸುಪ್ರೀಂ ಅಲ್ಲ. ರೇಣುಕಾ ಚಾರ್ಯ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ ರಾಜ್ಯ ಘಟಕ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದರು.