ಆನಗೋಡಿನಲ್ಲಿ ಇಂದು ರೈತ ಹುತಾತ್ಮರ ದಿನಾಚರಣೆ

ಸ್ಮಾರಕ ಭವನ ಉದ್ಘಾಟನೆ

ರೈತ ಹುತಾತ್ಮರ ಸ್ಮರಣಾರ್ಥ ಸಮಿತಿ ಹಾಗೂ ಜಿಲ್ಲೆಯ ರೈತ ಪರ ಸಂಘಟನೆಗಳ ಸಹಯೋಗದಲ್ಲಿ ಓಬೇನಹಳ್ಳಿ ಕಲ್ಲಿಂಗಪ್ಪ, ಸಿದ್ಧನೂರು ನಾಗರಾಜ್ ಆಚಾರ್ ಅವರ 31ನೇ ವರ್ಷದ ಹುತಾತ್ಮರ ದಿನಾಚರಣೆ ಹಾಗೂ ಸ್ಮಾರಕ ಭವನದ ಉದ್ಘಾಟನಾ ಸಮಾರಂಭವು ಆನ ಗೋಡು ಸಮೀಪದ ಉಳುಪಿನಕಟ್ಟೆ ಕ್ರಾಸ್ ಬಳಿ ಇಂದು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಅಧ್ಯಕ್ಷ ಎನ್.ಜಿ. ಪುಟ್ಟಸ್ವಾಮಿ ತಿಳಿಸಿದ್ದಾರೆ. ಸಾಣೇಹಳ್ಳಿ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ  ಕಾರ್ಯಕ್ರಮದ ಸಾನ್ನಿಧ್ಯ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಕಾರ್ಯ ಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಸಮಿತಿ ಗೌರವಾಧ್ಯಕ್ಷ ಆನಗೋಡು ನಂಜುಂಡಪ್ಪ, ಶಾಸಕ ಕೆ.ಎಸ್. ಬಸವಂತಪ್ಪ, ಜಿಲ್ಲಾಧಿಕಾರಿ ಎಂ.ವಿ. ವೆಂಕಟೇಶ್, ಎಸ್ಪಿ ಉಮಾ ಪ್ರಶಾಂತ್, ಜಿ.ಪಂ. ಸಿಇಓ ಸುರೇಶ್ ಇಟ್ನಾಳ್ ಭಾಗವಹಿಸಲಿದ್ದಾರೆ.

error: Content is protected !!