ದಿ. ನರಸಿಂಹರಾಜು ಜನ್ಮ ಶತಮಾನೋತ್ಸವ ಇಂದು

ದಿ. ನರಸಿಂಹರಾಜು ಜನ್ಮ ಶತಮಾನೋತ್ಸವ ಇಂದು

ದಾವಣಗೆರೆ, ಸೆ.23- ಅಖಿಲ ಕರ್ನಾಟಕ ಸರ್ವಜ್ಞ ಸಾಂಸ್ಕೃತಿಕ ವೇದಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಎಸ್.ಎಸ್. ಮಲ್ಲಿಕಾರ್ಜುನ್ ಹುಟ್ಟುಹಬ್ಬದ ಪ್ರಯುಕ್ತ ಹಾಸ್ಯ ಚಕ್ರವರ್ತಿ ದಿ. ನರಸಿಂಹರಾಜುರವರ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆಯ ರಾಜ್ಯಾಧ್ಯಕ್ಷ ಕೆ.ವೈ. ತಿಪ್ಪೇಸ್ವಾಮಿ ತಿಳಿಸಿದ್ದಾರೆ.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ ದಿನಾಂಕ 24ರ ಭಾನುವಾರ ಬೆಳಿಗ್ಗೆ 10.30ಕ್ಕೆ ಕುವೆಂಪು ಕನ್ನಡ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ. ಕುಂಬಾರ ಗುರುಪೀಠದ ಶ್ರೀ ಬಸವಮೂರ್ತಿ ಕುಂಬಾರ ಗುಂಡಯ್ಯ ಸ್ವಾಮೀಜಿ, ಶ್ರೀ ಶಿವಾನಂದ ಸರಸ್ವತಿ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಶಾಸಕ ಶಾಮನೂರು ಶಿವಶಂಕರಪ್ಪ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪಾಲಿಕೆ ಮೇಯರ್ ವಿನಾಯಕ ಬಿ.ಹೆಚ್. ಅಧ್ಯಕ್ಷತೆ ವಹಿಸಲಿದ್ದಾರೆ.

ಶ್ರೀಮತಿ ಸುಧಾ ನರಸಿಂಹರಾಜು ಹಾಗೂ ಕುಟುಂಬದವರು ಈ ವೇಳೆ ಉಪಸ್ಥಿತರಿರಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ನಗರಘಟಕದ ಅಧ್ಯಕ್ಷ ಕೆ.ನಾಗರಾಜ್, ಗ್ರಾಮಾಂತರ ಘಟಕದ ಅಧ್ಯಕ್ಷ ಕೆ.ಎಂ. ತಿಪ್ಪೇಸ್ವಾಮಿ, ಕಲಾವಿದ ಜಿ.ಹರೀಶ್ ಉಪಸ್ಥಿತರಿದ್ದರು.

error: Content is protected !!