ಭದ್ರಾ ನಾಲೆಗಳಿಗೆ ನೀರು ಬಿಡುಗಡೆ

ಶಿವಮೊಗ್ಗ, ಸೆ. 26-  ಭದ್ರಾ ಜಲಾಶಯದ ಮುಂಗಾರು ಬೆಳೆಗಳಿಗೆ ಬಲದಂಡೆ ಹಾಗೂ ಎಡದಂಡೆ ನಾಲೆಗಳಿಗೆ ನೀರನ್ನು ಸರದಿಯನ್ವಯ ಹರಿಸಲಾಗುವುದು ಎಂದು ಕ.ನೀ.ನಿ.ನಿ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ಹಾಗೂ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಸುಜಾತ ತಿಳಿಸಿದ್ದಾರೆ.

ಭದ್ರಾ ಬಲದಂಡೆ ನಾಲೆಗಳಿಗೆ ಸೆಪ್ಟೆಂಬರ್ 26 ರ ಮಂಗಳವಾರ ರಾತ್ರಿಯಿಂದ ಅಕ್ಟೋಬರ್ 15 ರವರೆಗೆ ಒಟ್ಟು 20 ದಿನ ನೀರು ಹರಿಸಲಾಗುವುದು. ನಂತರ ಮತ್ತೆ 10 ದಿವಸ ನಾಲೆಯಲ್ಲಿ ನೀರು ಬಂದ್ ಮಾಡಿ ಅಕ್ಟೋಬರ್ 26 ರಿಂದ ನವೆಂಬರ್ 17 ರವರೆಗೆ ಒಟ್ಟು 23 ದಿನಗಳ ಕಾಲ ನೀರನ್ನು ಹರಿಸಲಾಗುವುದು.

ಭದ್ರಾ ಎಡದಂಡೆ ನಾಲೆಗಳಿಗೆ ಈಗಾಗಲೇ ನೀರನ್ನು ಹರಿಸಲಾಗಿದ್ದು, ಅಕ್ಟೋಬರ್ 1 ರವರೆಗೆ ಒಟ್ಟು 15 ದಿನ ನೀರನ್ನು ಹರಿಸಲಾಗುತ್ತದೆ. ನಂತರ 10 ದಿವಸ ನಾಲೆಯಲ್ಲಿ ನೀರು ಬಂದ್ ಮಾಡಿ ಅಕ್ಟೋಬರ್ 12 ರಿಂದ 26 ರವರೆಗೆ ಒಟ್ಟು 15 ದಿನಗಳು ನೀರು ಹರಿಸಿ, ಪುನಃ 10 ದಿವಸ ಬಂದ್ ಮಾಡಿ, ನವೆಂಬರ್ 6 ರಿಂದ 17 ರವರೆಗೆ ಒಟ್ಟು 12 ದಿನಗಳ ಕಾಲ ನೀರನ್ನು ಹರಿಸಲಾಗುವುದೆಂದು ಸುಜಾತ ಅವರು ತಿಳಿಸಿದ್ದಾರೆ.

error: Content is protected !!