ದಾವಣಗೆರೆ, ಅ. 5- ಮಂಗಳೂರಿನ ಟೌನ್ ಹಾಲ್ನಲ್ಲಿ ಕಳೆದ ವಾರ ನಡೆದ ಕರ್ನಾಟಕ ರಾಜ್ಯ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಚಾಂಪಿಯನ್ಶಿಪ್ ಸಂದರ್ಭದಲ್ಲಿ ನಗರದ ಬೀರೇಶ್ವರ ವ್ಯಾಯಾಮ ಶಾಲೆಯ ಕ್ರೀಡಾಪಟು ಎಂ. ಮಹೇಶ್ವರಯ್ಯ ಅವರಿಗೆ ಪವರ್ ಲಿಫ್ಟಿಂಗ್ನಲ್ಲಿ ಜೀವಮಾನ ಸಾಧನಾ ಪ್ರಶಸ್ತಿ ನೀಡಲಾಗಿದೆ.
ಇದು 10 ಸಾವಿರ ರೂ.ಗಳ ನಗದು ಬಹುಮಾನ ಹಾಗೂ ಸ್ಮರಣಿಕೆ ಒಳಗೊಂಡಿದೆ. ಕರ್ನಾಟಕ ಪವರ್ಲಿಫ್ಟಿಂಗ್ ಅಸೋಸಿಯೇಷನ್ ಮೂಲಕ ಚಾಂಪಿಯನ್ಶಿಪ್ ಆಯೋಜಿಸಲಾಗಿತ್ತು.
ಕಶಾರ್ಪ್ ಫಿಟ್ನೆಸ್ ವತಿಯಿಂದ ಸತೀಶ್ ಕುಮಾರ್ ಕುದ್ರೋಳಿ, ಪ್ರದೀಪ್ ಕುಮಾರ್ ಆಚಾರ್ಯ ಅವರ ತಂಡದೊಂದಿಗೆ ಸಮಾರಂ ಭವನ್ನು ಆಯೋಜಿಸಲಾಗಿತ್ತು.
ಪವರ್ಲಿಫ್ಟಿಂಗ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಈ ಗೌರವಕ್ಕಾಗಿ ಮಂಗಳೂರಿನ ಕಶಾರ್ಪ್ ಫಿಟ್ನೆಸ್ ತಂಡಕ್ಕೆ ಧನ್ಯವಾದ ಸಲ್ಲಿಸಲಾಗಿದೆ.