ನಗರದಲ್ಲಿ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಕ್ಕಿ ಸಮರ್ಪಣೆ

ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನ ದಾಸೋಹಕ್ಕೆ ಅಕ್ಕಿ ಸಮರ್ಪಿಸುವ ಕಾರ್ಯಕ್ರಮವನ್ನು  ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳ ಆಶ್ರಯದಲ್ಲಿ ಶ್ರೀ ಸೋಮೇಶ್ವರ ವಿದ್ಯಾಲಯದ ಆವರಣದಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಸಾನ್ನಿಧ್ಯವನ್ನು ಹರಿಹರ ಶ್ರೀ ರಾಮಕೃಷ್ಣ ಮಿಷನ್‌ ಅಧ್ಯಕ್ಷರಾದ ಶ್ರೀ ಶಾರದೇಶಾನಂದ ಸ್ವಾಮೀಜಿ ವಹಿಸುವರು. ಮಾಜಿ ಸಚಿವ ಎಸ್.ಎ. ರವೀಂದ್ರನಾಥ್‌ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಡಾ. ಎ.ಹೆಚ್‌. ಶಿವಯೋಗಿಸ್ವಾಮಿ, ಹೆಚ್‌.ಆರ್‌. ಅಶೋಕ ರೆಡ್ಡಿ, ಎಸ್‌.ಜೆ. ಶ್ರೀಧರ್‌, ಬಿಸಲೇರಿ ನಾಗರಾಜ್‌ ಆಗಮಿಸುವರು. ಸಹಕಾರ : ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳ ಸಿಬ್ಬಂದಿ ವರ್ಗ ಹಾಗೂ ಪೋಷಕರು.

error: Content is protected !!