ಜಗಳೂರಲ್ಲಿ ಬರ ಅಧ್ಯಯನ ನಡೆಸಿದ ಕೇಂದ್ರದ ವಿ.ಅಶೋಕ್ ತಂಡ
ಜಗಳೂರು, ಅ.7- ಸರ್ಕಾರದ ಮಾರ್ಗಸೂಚಿ ಯನ್ವಯ ಜಿಲ್ಲೆಯ ಬರ ಪರಿಸ್ಥಿತಿಯ ವಾಸ್ತವ ಸ್ಥಿತಿಯ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಕೇಂದ್ರ ಬರ ಅಧ್ಯಯನದ ಮೂರನೇ ತಂಡದ ನೇತೃತ್ವ ವಹಿಸಿರುವ ಕೇಂದ್ರ ಜಲಶಕ್ತಿ ಆಯೋಗದ ನಿರ್ದೇಶಕ ವಿ.ಅಶೋಕ್ ಕುಮಾರ್ ಹೇಳಿದರು.
ತಾಲ್ಲೂಕಿನ ವಿವಿಧೆಡೆ ರೈತರ ಜಮೀನುಗಳಿಗೆ ಭೇಟಿ ನೀಡಿ, ಮಳೆ ಕೊರತೆಯಿಂದ ಉಂಟಾದ ಬೆಳೆ ಹಾನಿ ವೀಕ್ಷಣೆ ಮಾಡಿ ನಂತರ ಮಾಧ್ಯಮ ದರೊಂದಿಗೆ ಮಾತನಾಡಿದರು.
ದಾವಣಗೆರೆ ಜಿಲ್ಲೆಯಲ್ಲಿ 2.27 ಲಕ್ಷ ಹೆಕ್ಟೇರ್ ಪೈಕಿ 1.57 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ. ವಿಮಾ ಕಂಪನಿಗಳ ಪ್ರತಿನಿಧಿಗಳ ಜೊತೆ ಸಭೆ ನಡೆಸಿ ಕಟ್ಟುನಿಟ್ಟಿನ ಕ್ರಮಕೈಗೊಂಡು 47 ಸಾವಿರ ರೈತರಿಗೂ ಬೆಳೆ ವಿಮೆ ಪರಿಹಾರ
ವಿತರಣೆಗೆ ಕ್ರಮವಹಿಸಲಾಗುವುದು.
– ಡಾ. ಎಂ.ವಿ. ವೆಂಕಟೇಶ್, ಜಿಲ್ಲಾಧಿಕಾರಿ
ಬರದ ತೀವ್ರತೆ ಮನವರಿಕೆ ಮಾಡಿಕೊಟ್ಟ ರೈತರು
ಜಗಳೂರು, ಅ.7- ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿ ಪರಿಶೀಲಿಸಲು ಕೇಂದ್ರ ಬರ ಅಧ್ಯಯನದ ಮೂರನೇ ತಂಡ ಇಂದು ತಾಲ್ಲೂಕಿನ ಮುಸ್ಟೂರು, ದೊಣೆಹಳ್ಳಿ, ಹಿರೇಮಲ್ಲನಹೊಳೆ, ಸಿದ್ದಿಹಳ್ಳಿ, ಭರಮಸಮುದ್ರ ಗ್ರಾಮಗಳ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ರೈತರು ಮತ್ತು ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದುಕೊಂಡಿತು.
ಕೇಂದ್ರ ಜಲಶಕ್ತಿ ಆಯೋಗದ ನಿರ್ದೇಶಕ ವಿ.ಅಶೋಕ್ ಕುಮಾರ್, ಎಂ.ಎನ್.ಸಿ.ಎಫ್.ಸಿ ಉಪನಿರ್ದೇಶಕ ಕರಣ್ ಚೌಧರಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪಕಾರ್ಯದರ್ಶಿ ಸಂಗೀತ್ ಕುಮಾರ್ ಹಾಗೂ ರಾಜ್ಯ ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರದ ಹಿರಿಯ ಸಲಹೆಗಾರ ಡಾ. ಶ್ರೀನಿವಾಸ ರೆಡ್ಡಿ ಅವರನ್ನು ಒಳಗೊಂಡ ಕೇಂದ್ರ ಬರ ಅಧ್ಯಯನ ತಂಡವನ್ನು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಸುರೇಶ್ ಬಿ. ಇಟ್ನಾಳ್ ಸ್ವಾಗತಿಸಿದರು.
ಬರ ಅಧ್ಯಯನ ತಂಡವು ಮೊದಲಿಗೆ ತಾಲ್ಲೂಕಿನ ದೊಣೆಹಳ್ಳಿ ಗ್ರಾಮದ ರೈತರಾದ ಜಯಮ್ಮ ಅವರ 4 ಎಕರೆ ರಾಗಿ, ಸೋಮಶೇಖರ್ ಅವರ 1.39 ಎಕರೆಯಲ್ಲಿ ಬೆಳೆದಿರುವ ರಾಗಿ, ತಿಪ್ಪೇರುದ್ರಪ್ಪ ಅವರ 3 ಎಕರೆ ಮೆಕ್ಕೆಜೋಳ ಬೆಳೆ ವೀಕ್ಷಣೆ ನಂತರ ಶಾಂತಮ್ಮ ನವರು ಬೆಳೆದ ನವಣೆ ವೀಕ್ಷಣೆ ಮಾಡಿತು. ರೈತರು ಹಾಗೂ ಅಧಿಕಾರಿಗಳು ಮಳೆಯ ಕೊರತೆಯಿಂದ ಬೆಳೆ ಹಾನಿಯಾದ ಬಗ್ಗೆ ಪೈರುಗಳನ್ನು ತೋರಿಸಿ, ಬರದ ತೀವ್ರತೆಯ ಬಗ್ಗೆ ಮನವರಿಕೆ ಮಾಡಿಕೊಟ್ಟರು.
ರೈತರು ಮುಂಗಾರು ಮಳೆ ಇಲ್ಲದೆ ಬೆಳೆ ಹಾನಿಯಾದ ಬಗ್ಗೆ ಹಾಗೂ ಉಂಟಾದ ನಷ್ಟದ ಬಗ್ಗೆ ತಮ್ಮ ಅಳಲನ್ನು ತೋಡಿಕೊಂಡು, ಬೆಳೆ ನಷ್ಟ ಪರಿಹಾರಕ್ಕೆ ರೈತರು ಮನವಿ ಮಾಡಿದರು.
ದಾವಣಗೆರೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಮಾತನಾಡಿ, ಜಿಲ್ಲೆಯ ಬರ ಪರಿಸ್ಥಿತಿ ಅಧ್ಯಯನ ಮಾಡಲು ಹಾಗೂ ವಿಸ್ತೃತ ವರದಿ ನೀಡಲು ಜಿಲ್ಲೆಯ ತಾಲ್ಲೂಕಿಗೆ ಕೇಂದ್ರ ಬರ ಅಧ್ಯಯನ ತಂಡ ಆಗಮಿಸಿದ್ದು, ಜಗಳೂರು ತಾಲ್ಲೂಕಿನ ವಿವಿಧೆಡೆ ರೈತರ ಜಮೀನುಗಳಿಗೆ ಭೇಟಿ ನೀಡಿ, ಬರ ಪರಿಶೀಲನೆ ನಡೆಸಲಾಗಿದೆ ಎಂದರು.
ದಾವಣಗೆರೆ ಜಿಲ್ಲೆಯಲ್ಲಿ ಶೇ.93ರಷ್ಟು ಬಿತ್ತನೆಯಾಗಿದ್ದು, ತೀವ್ರ ಬರ ಪರಿಸ್ಥಿತಿ ಕಾರಣದಿಂದಾಗಿ ಜಿಲ್ಲೆಯ ಎಲ್ಲಾ ಆರು ತಾಲ್ಲೂಕುಗಳನ್ನು ಬರ ಪೀಡಿತ ತಾಲ್ಲೂಕುಗಳು ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಅದರಂತೆ ಜಂಟಿ ಸಮೀಕ್ಷೆ ಮಾಡಿ 1.57 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ಎನ್ಡಿಆರ್ಎಫ್ ಮಾರ್ಗಸೂಚಿಯಂತೆ ಇನ್ಪುಟ್ ಸಬ್ಸಿಡಿ ನೀಡುವಂತೆ ವರದಿ ಸಲ್ಲಿಸಿದೆ. ಆ ವರದಿಯಂತೆ ಬರ ಪರಿಸ್ಥಿತಿ ಪರಿಶೀಲಿಸಿ, ವಿಸ್ತೃತ ವರದಿ ನೀಡಲು ಕೇಂದ್ರ ಬರ ಅಧ್ಯಯನ ಮೂರನೇ ತಂಡದ ನೇತೃತ್ವ ವಹಿಸಿರುವ ತಂಡ ಆಗಮಿಸಿದೆ. ಜಿಲ್ಲೆಯ ಬರದ ಸ್ಥಿತಿಯ ಕುರಿತು ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿಕೊಡಲಾಗಿದೆ ಎಂದರು.
ಈಗಾಗಲೇ ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಬರ ಅಧ್ಯಯನ ಕಾರ್ಯ ಕೈಗೊಂಡು, ಶನಿವಾರ ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಯ ವಿವಿಧೆಡೆ ರೈತರ ಜಮೀನುಗಳಿಗೆ ಭೇಟಿ ನೀಡಿ, ಬರ ಪರಿಸ್ಥಿತಿಯ ಅಧ್ಯಯನ ಮಾಡಲಾಗುತ್ತಿದೆ. ಜಿಲ್ಲೆಯ ಬರ ಪರಿಸ್ಥಿತಿ ಕುರಿತು ರೈತರೊಂದಿಗೆ ಸಂವಾದ ನಡೆಸಿ, ಮಾಹಿತಿ ಪಡೆಯಲಾಗು ತ್ತಿದೆ. ಇದರ ಜೊತೆಗೆ ಜಿಲ್ಲಾಡಳಿತವೂ ಸಹ ಬರದ ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟಿದೆ ಎಂದು ತಿಳಿಸಿದರು.
ವಾಸ್ತವ ಸ್ಥಿತಿಯ ವರದಿಯನ್ನು ರಾಜ್ಯದ ಬರ ಅಧ್ಯಯನ ತಂಡದ ನೇತೃತ್ವ ವಹಿಸಿರುವ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿ ವಾಲಯದ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು ಅವರಿಗೆ ಸಲ್ಲಿಸಲಾಗುವು ದು, ಬಳಿಕ ರಾಜ್ಯದ ಸಂಗ್ರಹಿತ, ಕ್ರೋಢೀಕೃತ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾ ಗುವುದು ಎಂದು ಅವರು ತಿಳಿಸಿದರು.