ಮಲೇಬೆನ್ನೂರಿನಲ್ಲಿ ಶ್ರಮದಾನದ ಮೂಲಕ ಸ್ವಚ್ಛತೆ

ಮಲೇಬೆನ್ನೂರು, ಅ. 9 – ಗಾಂಧಿ ಜಯಂತಿ ಅಂಗವಾಗಿ ಪಟ್ಟಣದಲ್ಲಿ ಪುರಸಭೆ, ಪೊಲೀಸ್ ಠಾಣೆ ಮತ್ತು ಶ್ರೀ ಬೀರಲಿಂಗೇಶ್ವರ ಶಾಲೆಗಳ ವತಿಯಿಂದ ಶ್ರಮದಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. 

ಪುರಸಭೆ ವತಿಯಿಂದ ಮುಖ್ಯಾಧಿಕಾರಿ ಎ. ಸುರೇಶ್, ಪುರಸಭೆ ಸದಸ್ಯರಾದ ಗೌಡ್ರ ಮಂಜಣ್ಣ, ಸಾಬೀರ್ ಅಲಿ, ಟಿ. ಹನುಮಂತಪ್ಪ , ಭೋವಿ ಶಿವು, ಕೆ.ಪಿ. ಗಂಗಾಧರ್, ಬಿ. ಸುರೇಶ್ ಹಾಗೂ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಮತ್ತು ಪೌರ ಕಾರ್ಮಿಕರು ಸೇರಿ ಸಂತೆ ಮೈದಾನವನ್ನು ಸ್ವಚ್ಛಗೊಳಿಸಿದರು. 

ಪಿಎಸ್ಐ ಪ್ರಭು ಕೆಳಗಿನ ಮನಿ ಎಎಸ್ಐ ಶ್ರೀನಿವಾಸ್ ಅವರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ವರ್ಗದವರು ಹಳೇ ಪೊಲೀಸ್‌ ಠಾಣೆ ಮತ್ತು ಪೊಲೀಸ್‌ ಠಾಣೆ ರಸ್ತೆಯನ್ನು ಸ್ವಚ್ಛಗೊಳಿಸಿ ಶ್ರಮದಾನ ಮಾಡಿದರು.

ಬೀರಲಿಂಗೇಶ್ವರ ಬಾಲಕರ ಫ್ರೌಡ ಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ ಶಾಲೆಯ ಆವರಣವನ್ನು ಮುಖ್ಯ ಶಿಕ್ಷಕರಾದ ಸಿ. ಜಯಣ್ಣ ಹಾಗೂ ಕರಿಬಸಪ್ಪನವರ ನೇತೃತ್ವದಲ್ಲಿ ವಿದ್ಯಾರ್ಥಿಗಳು ಶ್ರಮದಾನ ಮಾಡಿದರು.

error: Content is protected !!