ಶ್ರೀ ಸಿಗಂದೂರು ಚೌಡಮ್ಮ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್ನ ವಿದ್ಯಾಸಾಗರ ಶಾಲೆಯಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ‘ಪ್ರಾಜೆಕ್ಟ್ ಗಿವ್’ ಉದ್ಘಾಟನಾ ಸಮಾರಂಭವನ್ನು ಆಯೋಜಿಸಲಾಗಿದೆ. ಹರಿಹರದ ವಿವೇಕಾನಂದ ರಾಮಕೃಷ್ಣಾಶ್ರಮದ ಶ್ರೀ ಶಾರದೇಶಾನಂದ ಸ್ವಾಮೀಜಿ ಹಾಗೂ ಶ್ರೀ ಕ್ಷೇತ್ರ ಸಿಗಂದೂರು ದೇವಾಲಯದ ಧರ್ಮದರ್ಶಿ ರಾಮಪ್ಪ ಇವರ ದಿವ್ಯ ಸಾನ್ನಿಧ್ಯದಲ್ಲಿ ನಡೆಯುವ ಕಾರ್ಯಕ್ರಮದ ಉದ್ಘಾಟನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಪುಷ್ಪಲತಾ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರುಣಾಜೀವ ಕಲ್ಯಾಣ ಟ್ರಸ್ಟ್ ಸಂಸ್ಥಾಪಕ ಶಿವನಕೆರೆ ಬಸವಲಿಂಗಪ್ಪ, ಎಸ್.ಎಸ್. ವೈದ್ಯಕೀಯ ಕಾಲೇಜಿನ ಉಪ ಪ್ರಾಂಶುಪಾಲ ಡಾ. ಶಶಿಕಲಾ ಕೃಷ್ಣಮೂರ್ತಿ, ಆರ್.ಎಂ.ಎಸ್.ಎ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಎಂ.ಸುರೇಶ್, ನಿಟುವಳ್ಳಿಯ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ಮುಖ್ಯೋಪಾಧ್ಯಾಯ ಎ.ಕೆ. ಚಂದ್ರಪ್ಪ ಇವರು ಪಾಲ್ಗೊಳ್ಳಲಿದ್ದಾರೆ.
July 24, 2024