ದಾವಣಗೆರೆ, ಅ.9- ನಗರದ ಆಂಜನೇಯ ಬಡಾವಣೆಯಲ್ಲಿರುವ ಯೋಗ ಮಂದಿರದಲ್ಲಿ ಎಸ್ಸೆಸ್ಸೆಲ್ಸಿ ತೇರ್ಗಡೆ ಹೊಂದಿದ ಜಿಲ್ಲೆಯ ಆಸಕ್ತ ಮಹಿಳಾ ಉದ್ಯಮಾಕಾಂಕ್ಷಿಗಳಿಗೆ ಇದೇ ದಿನಾಂಕ 25 ರಿಂದ ನವೆಂಬರ್ 3 ರವರೆಗೆ ಉದ್ಯಮಶೀಲತಾಭಿವೃದ್ಧಿ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಸಿಡಾಕ್ (ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ, ಧಾರವಾಡ) ಸಂಸ್ಥೆಯಿಂದ ಈ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.
ವಿವರಕ್ಕೆ ಜಂಟಿ ನಿರ್ದೇಶಕರ ಕಛೇರಿ, ಸಿಡಾಕ್, ಪ್ಲಾಟ್ ನಂ: 76ಎ-(ಪಿ1), ಕರೂರು ಕೈಗಾರಿಕಾ ಪ್ರದೇಶ, ಪಿ.ಬಿ. ರಸ್ತೆ, ದಾವಣಗೆರೆ. ತರಬೇತಿದಾರರಾದ ಜಿ.ಕೆ.ವಿನಯ (9886115200), ಜಿ.ಬಿ.ಬಸವರಾಜ (9164742033) ಸಂಪರ್ಕಿಸಲು ಸಿಡಾಕ್ನ ಜಿಲ್ಲಾ ಜಂಟಿ ನಿರ್ದೇಶಕರು ಆರ್.ಪಿ. ಪಾಟೀಲ್ ತಿಳಿಸಿದ್ದಾರೆ.