ಲೋಕ ಸಭಾ ಚುನಾವಣೆ : ಚಿತ್ರದುರ್ಗಕ್ಕೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಹೆಚ್. ದುಗ್ಗಪ್ಪ ಮನವಿ

ಲೋಕ ಸಭಾ ಚುನಾವಣೆ : ಚಿತ್ರದುರ್ಗಕ್ಕೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಹೆಚ್. ದುಗ್ಗಪ್ಪ ಮನವಿ

ದಾವಣಗೆರ, ಅ. 11 – ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಿ ತಮ್ಮಗಳ ಸೇವೆ ಮಾಡಲು ಅವಕಾಶ ನೀಡುವಂತೆ ಕಾಂಗ್ರೆಸ್‌ ವರಿಷ್ಠರಿಗೆ ಕೆಪಿಸಿಸಿ ಸದಸ್ಯ ಹೆಚ್. ದುಗ್ಗಪ್ಪ ಮನವಿ ಮಾಡಿದ್ದಾರೆ.

ಕಳೆದ 40 ವರ್ಷಗಳಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತಿರುವ ತಮಗೆ ಪಕ್ಷದಲ್ಲಿ ಇಲ್ಲಿಯವರೆಗೂ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ, ವಿಧಾನಪರಿಷತ್ ಸದಸ್ಯ ಸ್ಥಾನ ಯಾವುದನ್ನೂ ನೀಡದೇ ಮುಂದೂಡುತ್ತಲೇ ಬರುತ್ತಿದ್ದಾರೆ. ವಿಧಾನಸಭಾ ಚುನಾವಣೆಯಲ್ಲೂ ಮಾಯಕೊಂಡ ಕ್ಷೇತ್ರದ ಆಕಾಂಕ್ಷಿಯಾಗಿದ್ದ ನನಗೆ ಟಿಕೇಟ್ ಕೈತಪ್ಪಿತು. ಆದ್ದರಿಂದ ಈ ಲೋಕಸಭಾ ಚುನಾವಣೆಗೆ ಟಿಕೆಟ್ ನೀಡುವುದಾಗಿ ಪಕ್ಷದ ಹೈಕಮಾಂಡ್ ಭರವಸೆ ನೀಡಿದ್ದು, ಟಿಕೆಟ್ ಸಿಕ್ಕರೆ ನನಗೆ ಜನಸೇವೆ ಮಾಡಲು ಅವಕಾಶ ಸಿಗಲಿದೆ ಎಂದಿದ್ದಾರೆ.

ಚಿತ್ರದುರ್ಗ ಜಿಲ್ಲೆಯಲ್ಲಿ ದಿ. ಕೆ.ಹೆಚ್. ರಂಗನಾಥ ಒಬ್ಬರನ್ನು ಬಿಟ್ಟರೆ ಯಾರೂ ಸಹ ಸ್ವಂತ ಜಿಲ್ಲೆಯವರು ಆಯ್ಕೆಯಾದ ಇತಿಹಾಸವೇ ಇಲ್ಲ. ಇಲ್ಲಿ ಹೊರ ಜಿಲ್ಲೆಯಿಂದ ಬಂದವರೇ ಸಂಸದರಾಗುತ್ತಿದ್ದಾರೆ. ಬಿಜೆಪಿ ಪಕ್ಷದಿಂದ ಬೆಂಗಳೂರಿನ ನಾರಾಯಣ ಸ್ವಾಮಿಯವರು, ಇಂತಹ ಅನೇಕರು ಹೊರ ಜಿಲ್ಲೆಯಿಂದ ಈ ಜಿಲ್ಲೆಯಲ್ಲಿ ಸ್ಪರ್ಧಿಸಿ ಗೆಲ್ಲುತ್ತಾ ಬರುತ್ತಿದ್ದಾರೆ. ಗೆದ್ದಿರುವ ಇತಿಹಾಸ ಮುಂದುವರೆಯುತ್ತಲೇ ಇದೆ. ಆದ್ದರಿಂದ ಮಾತೃ ಜಿಲ್ಲೆಯ ಮಗನಾದ ನಾನು ಈ ಬಾರಿ ಲೋಕಸಭಾ ಮೀಸಲು ಚುನಾವಣೆಗೆ ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿರುವುದರಿಂದ ಪಕ್ಷ ತಮ್ಮನ್ನು ಪರಿಗಣಿಸಬೇಕೆಂದು ಮನವಿ ಮಾಡಿದ್ದಾರೆ.

error: Content is protected !!