ನಗರದಲ್ಲಿ ನಾಳೆ ಶ್ರೀ ಸಾಯಿಬಾಬಾರವರ 105ನೇ ಪುಣ್ಯಾರಾಧನೆ ಮಹೋತ್ಸವ

ನಗರದಲ್ಲಿ ನಾಳೆ ಶ್ರೀ ಸಾಯಿಬಾಬಾರವರ 105ನೇ ಪುಣ್ಯಾರಾಧನೆ ಮಹೋತ್ಸವ

ದಾವಣಗೆರೆ, ಅ. 12- ನಗರದ ಎಂಸಿಸಿ ಎ ಬ್ಲಾಕ್, 8ನೇ ಮುಖ್ಯ ರಸ್ತೆಯಲ್ಲಿರುವ ಶ್ರೀ ಸಾಯಿಬಾಬಾ ಮಂದಿರದಲ್ಲಿ ಶ್ರೀ ಸದ್ಗುರು ಸಾಯಿಬಾಬಾರವರ 105ನೇ ಪುಣ್ಯಾರಾಧನೆ ಮಹೋತ್ಸವವು ನಾಡಿದ್ದು ದಿನಾಂಕ 14 ರಿಂದ 25ರವರೆಗೆ 10 ದಿನಗಳ ಕಾಲ ನಡೆಯಲಿದೆ.

ಶ್ರೀ ಸಾಯಿ ಟ್ರಸ್ಟ್  ಆಜೀವ ಛೇರ್ಮನ್  ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ, ಕಾರ್ಯಾಧ್ಯಕ್ಷರೂ ಆದ  ಹಿರಿಯ ಕೈಗಾರಿಕೋದ್ಯಮಿ ಎಸ್.ಎಸ್. ಗಣೇಶ್, ಉಪಾಧ್ಯಕ್ಷರೂ ಆಗಿರುವ ಹಿರಿಯ ಕೈಗಾರಿಕೋದ್ಯಮಿ ಅಥಣಿ ವೀರಣ್ಣ ಅವರುಗಳ ನೇತೃತ್ವದಲ್ಲಿ ಕಾರ್ಯಕ್ರಮ ಏರ್ಪಾಡಾಗಿದೆ.

ಶ್ರೀ ಸಾಯಿಬಾಬಾ ಮೂರ್ತಿಗೆ ಪ್ರತಿದಿನ ಬೆಳಿಗ್ಗೆ 5.30 ಗಂಟೆಗೆ ಕಾಕಡಾರತಿ, ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ಮಹಾಮಂಗ ಳಾರತಿ ಕಾರ್ಯಕ್ರಮಗಳು ಜರುಗಲಿವೆ.

ದಿನಾಂಕ 14ರ ಶನಿವಾರ ಬೆಳಿಗ್ಗೆ 9 ಗಂಟೆಗೆ ದೀಪಾರಾಧನೆ ಕಾರ್ಯಕ್ರಮವನ್ನು ಶ್ರೀ ಜಡೇಸಿದ್ಧ ಶಿವಯೋಗೇಶ್ವರ ಶಾಂತಾಶ್ರಮದ ಶ್ರೀ ಶಿವಾನಂದ ಸ್ವಾಮೀಜಿ ನೆರವೇರಿಸುವರು.

ದಿನಾಂಕ 15ರ ಭಾನುವಾರ ಬೆಳಿಗ್ಗೆ 8 ಗಂಟೆಗೆ ಮಹಾಮಂಗಳಾರತಿ,  9 ಗಂಟೆಗೆ ಸಾಮೂಹಿಕ ಶ್ರೀ ಸಾಯಿ ಸತ್ಯನಾರಾಯಣ ಪೂಜೆ  ನಡೆಯಲಿದೆ.

ದಿನಾಂಕ 19ರ ಗುರುವಾರ ಬೆಳಿಗ್ಗೆ 8 ಗಂಟೆಗೆ ಶ್ರೀ ಸಾಯಿಬಾಬಾ ಬೆಳ್ಳಿ ಮೂರ್ತಿಗೆ ಭಕ್ತರಿಂದ ವಿಶೇಷ ಅಭಿಷೇಕ, ಹೂವಿನ ಅಲಂಕಾರ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ಜರುಗಲಿದೆ.

ದಿನಾಂಕ 24ರ ಮಂಗಳವಾರ ಬೆಳಿಗ್ಗೆ 7.30ಕ್ಕೆ ಶ್ರೀ ಸಾಯಿಬಾಬಾ ಮೂರ್ತಿಗೆ ರುದ್ರಾಭಿಷೇಕ, ಹೂವಿನ ಅಲಂಕಾರ, ಪ್ರಸಾದ ವಿನಿಯೋಗ ನಡೆಯಲಿದೆ. ಅದೇ ದಿನ ಸಂಜೆ 6 ಗಂಟೆಗೆ ಬನ್ನಿ ಮುಡಿಯುವ ಕಾರ್ಯಕ್ರಮ ಜರುಗುವುದು.

ದಿನಾಂಕ 25ರ ಬುಧವಾರ ಸಂಜೆ 5.30ಕ್ಕೆ ಶ್ರೀ ಸಾಯಿಬಾಬಾರವರ ಮೆರವಣಿಗೆಯು ರಾಜ ಬೀದಿಗಳಲ್ಲಿ ನಡೆಯುವುದರೊಂದಿಗೆ ಕಾರ್ಯ ಕ್ರಮ ಸಮಾರೋಪಗೊಳ್ಳಲಿದೆ ಎಂದು ಶ್ರೀ ಸಾಯಿ ಟ್ರಸ್ಟ್ ಕಾರ್ಯದರ್ಶಿ ಎಂ. ಶಿವಪ್ಪ ವಿವರಿಸಿದ್ದಾರೆ.

error: Content is protected !!